‘ಕೋವಿಡ್–19 ಸಂಕಷ್ಟದಲ್ಲಿರುವ ರೈತರಿಗೆ ಈ ಕಾಯ್ದೆಗಳಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪ್ರಜಾತಾಂತ್ರಿಕ ಚರ್ಚೆಗಳಿಗೆ ಕಿಂಚಿತ್ತೂ ಬೆಲೆ ನೀಡದೆ, ಕೋವಿಡ್ ಸಂದರ್ಭ ಬಳಸಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತರಾತುರಿಯಲ್ಲಿ ಅಂಗೀಕರಿಸುತ್ತಿರುವ ಕುತಂತ್ರವು ಬಯಲಾಗಿದೆ. ಇದರಿಂದ, ಕೃಷಿ ಉತ್ಪಾದನೆ ಮತ್ತು ಮಾರುಕಟ್ಟೆ ಕ್ಷೇತ್ರಗಳಲ್ಲಿ ಕಾರ್ಪೊರೇಟ್ ಕಂಪನಿಗಳು ಲಗ್ಗೆ ಇಟ್ಟು ಸಣ್ಣ ಮತ್ತು ಮಧ್ಯಮ ವರ್ಗದ ರೈತರು ನಾಶವಾಗುತ್ತಾರೆ. ಮಧ್ಯಮ ವರ್ಗದ ವ್ಯಾಪಾರಿಗಳು ಕೂಡ ದಿವಾಳಿಯಾಗುತ್ತಾರೆ. ಇದನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟವನ್ನು ಎಲ್ಲರೂ ಬೆಂಬಲಿಸಬೇಕು’ ಎಂದು ಜಿಲ್ಲಾ ಸಂಘಟಕ ಮಹಾಂತೇಶ ಬಿಳೂರ ಕೋರಿದ್ದಾರೆ.