‘ಆಹಾರ ಧಾನ್ಯ ಗೋದಾಮುಗಳಲ್ಲಿದ್ದರೂ ವಿತರಿಸದಿರುವುದು ಖಂಡನೀಯ. ಇದು, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಹೊಟ್ಟೆಯ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರವು ಸಂವೇದನಾರಹಿತ ಧೋರಣೆ ಬಿಟ್ಟು, ಕೂಡಲೇ ಎಚ್ಚೆತ್ತುಕೊಂಡು ಗೋದಾಮಿನಲ್ಲಿರುವ ಧಾನ್ಯಗಳನ್ನು ಮಕ್ಕಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು’ ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.