<p><strong>ಐಗಳಿ:</strong> ‘ಧರ್ಮದ ಹಾದಿಯಲ್ಲೇ ಸಾಗಬೇಕು. ಇಲ್ಲದಿದ್ದರೆ ಮೋಕ್ಷ ಸಿಗದು’ ಎಂದು ಮುತ್ತೂರಿನ ಗುರುಸಿದ್ಧೇಶ್ವರ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಸಿಂಧೂರ ವಸತಿಯಲ್ಲಿ ಅಪ್ಪಯ್ಯ ಸ್ವಾಮಿ ಜಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ಪ್ರಥಮ ಶಿವಾನುಭವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಸಾಧ್ಯವಾದಷ್ಟು ಉತ್ತಮ ಕೆಲಸಗಳನ್ನು ಮಾಡಬೇಕು. ಎಷ್ಟು ವರ್ಷ ಬದುಕಿದ್ದೇವೆ ಎಂಬುದು ಮುಖ್ಯವಲ್ಲ. ಇನ್ನೊಬ್ಬರಿಗೆ ಎಷ್ಟು ಸಹಾಯ ಮಾಡಿದ್ದೇವೆ ಎಂಬುದೇ ಮುಖ್ಯ’ ಎಂದರು.</p>.<p>ಡಾ. ಬಸಗೌಡ ಪಾಟೀಲ ಮಾತನಾಡಿ, ‘ಎಲ್ಲ ಸಂಪತ್ತಿಗಿಂತ ಶರೀರ ಸಂಪತ್ತೇ ಲೇಸು. ಪ್ರತಿಯೊಬ್ಬರೂ ಆರೋಗ್ಯಕ್ಕೆ ಒತ್ತು ಕೊಡಬೇಕು. ದುಶ್ಚಟಗಳಿಂದ ದೂರವಿರಬೇಕು’ ಎಂದು ತಿಳಿಸಿದರು.</p>.<p>ಝುಂಜರವಾಡದ ಬಸವರಾಜೇಂದ್ರ ಶರಣರು, ಬಸವಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು. ಮಹಾದೇವ ಹಾಲಳ್ಳಿ ಅಧ್ಯಕ್ಷತೆ ವಹಿಸಿದ್ದರು. ಅಪ್ಪಾಸಾಬ ಪಾಟೀಲ, ಎಂ.ಬಿ. ನೇಮಗೌಡ, ಸುರೇಶ ಬಿಜ್ಜರಗಿ, ನಿಂಗಪ್ಪ ತೆಲಸಂಗ, ರವೀಂದ್ರ ಹಾಲಳ್ಳಿ, ಶ್ರೀಶೈಲ ಮಿರ್ಜಿ, ಜಗದೀಶ ತೆಲಸಂಗ, ಕೇದಾರಿ ಬಿರಾದಾರ, ಮಲಗೌಡ ಪಾಟೀಲ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಐಗಳಿ:</strong> ‘ಧರ್ಮದ ಹಾದಿಯಲ್ಲೇ ಸಾಗಬೇಕು. ಇಲ್ಲದಿದ್ದರೆ ಮೋಕ್ಷ ಸಿಗದು’ ಎಂದು ಮುತ್ತೂರಿನ ಗುರುಸಿದ್ಧೇಶ್ವರ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಸಿಂಧೂರ ವಸತಿಯಲ್ಲಿ ಅಪ್ಪಯ್ಯ ಸ್ವಾಮಿ ಜಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ಪ್ರಥಮ ಶಿವಾನುಭವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಸಾಧ್ಯವಾದಷ್ಟು ಉತ್ತಮ ಕೆಲಸಗಳನ್ನು ಮಾಡಬೇಕು. ಎಷ್ಟು ವರ್ಷ ಬದುಕಿದ್ದೇವೆ ಎಂಬುದು ಮುಖ್ಯವಲ್ಲ. ಇನ್ನೊಬ್ಬರಿಗೆ ಎಷ್ಟು ಸಹಾಯ ಮಾಡಿದ್ದೇವೆ ಎಂಬುದೇ ಮುಖ್ಯ’ ಎಂದರು.</p>.<p>ಡಾ. ಬಸಗೌಡ ಪಾಟೀಲ ಮಾತನಾಡಿ, ‘ಎಲ್ಲ ಸಂಪತ್ತಿಗಿಂತ ಶರೀರ ಸಂಪತ್ತೇ ಲೇಸು. ಪ್ರತಿಯೊಬ್ಬರೂ ಆರೋಗ್ಯಕ್ಕೆ ಒತ್ತು ಕೊಡಬೇಕು. ದುಶ್ಚಟಗಳಿಂದ ದೂರವಿರಬೇಕು’ ಎಂದು ತಿಳಿಸಿದರು.</p>.<p>ಝುಂಜರವಾಡದ ಬಸವರಾಜೇಂದ್ರ ಶರಣರು, ಬಸವಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು. ಮಹಾದೇವ ಹಾಲಳ್ಳಿ ಅಧ್ಯಕ್ಷತೆ ವಹಿಸಿದ್ದರು. ಅಪ್ಪಾಸಾಬ ಪಾಟೀಲ, ಎಂ.ಬಿ. ನೇಮಗೌಡ, ಸುರೇಶ ಬಿಜ್ಜರಗಿ, ನಿಂಗಪ್ಪ ತೆಲಸಂಗ, ರವೀಂದ್ರ ಹಾಲಳ್ಳಿ, ಶ್ರೀಶೈಲ ಮಿರ್ಜಿ, ಜಗದೀಶ ತೆಲಸಂಗ, ಕೇದಾರಿ ಬಿರಾದಾರ, ಮಲಗೌಡ ಪಾಟೀಲ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>