<p><strong>ಐಗಳಿ: </strong>‘ಭಾರತದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ವೀರ ರಾಣಿ ಚನ್ನಮ್ಮನ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಂಡು, ಸಮಾಜಮುಖಿ ಕಾರ್ಯ ಮಾಡಬೇಕು’ ಎಂದು ಬಸವೇಶ್ವರ ಪಿ.ಕೆ.ಪಿ.ಎಸ್. ಅಧ್ಯಕ್ಷ ಎ.ಬಿ. ನೇಮಗೌಡ ಹೇಳಿದರು.</p>.<p>ಕಿತ್ತೂರು ವಿಜಯೋತ್ಸವ ಅಂಗವಾಗಿ ಇಲ್ಲಿನ ಚನ್ನಮ್ಮ ವೃತ್ತದಲ್ಲಿ ಚನ್ನಮ್ಮ ಫೊಟೊಗೆ ಶುಕ್ರವಾರ ಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಬ್ರಿಟಿಷರ ಬಹು ದೊಡ್ಡ ಸೈನ್ಯದ ವಿರುದ್ಧ ಹೋರಾಡಿದದ ಆ ಮಹಿಳೆ ಇಡೀ ಜಗತ್ತಿನಾದ್ಯಂತ ವೀರ ರಾಣಿ ಎನಿಸಿದ್ದಾರೆ’ ಎಂದರು.</p>.<p>ಮುಖಂಡ ಶಿವಾನಂದ ಸಿಂಧೂರ, ‘ಸತತ ಮಳೆಯಿಂದ ಗೋವಿನ ಜೋಳ, ಕಬ್ಬು, ತೊಗರಿ, ದ್ರಾಕ್ಷಿ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ಮೆಕ್ಕೆಜೋಳ ತೆನೆಯಲ್ಲಿ ಮೊಳಕೆಗಳು ಬಂದಿವೆ. ಸರ್ಕಾರ ಅನ್ನದಾತನಿಗೆ ಸಮರ್ಪಕ ಬೆಳೆ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಶಿವನಿಂಗ ಅರಟಾಳ, ಅಪ್ಪಾಸಾಬ ಭೀ. ತೆಲಸಂಗ, ಶಿವಾನಂದ ಪಾಟೀಲ, ಅಣ್ಣಾರಾಯ ಹಾಲಳ್ಳಿ, ಈರಪ್ಪ ಅರಟಾಳ, ಶಂಕರ ಹಿಪ್ಪರಗಿ, ರಾಮು ಹಾಲಳ್ಳಿ, ಅಜೀತ ಜತ್ತಿ, ರವಿ ಹಾಲಳ್ಳಿ, ಮುಲಗೌಡ ಪಾಟೀಲ, ಅಪ್ಪಾಸಾಬ ಮದಬಾವಿ, ಸಿದ್ದು ಮುದಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಐಗಳಿ: </strong>‘ಭಾರತದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ವೀರ ರಾಣಿ ಚನ್ನಮ್ಮನ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಂಡು, ಸಮಾಜಮುಖಿ ಕಾರ್ಯ ಮಾಡಬೇಕು’ ಎಂದು ಬಸವೇಶ್ವರ ಪಿ.ಕೆ.ಪಿ.ಎಸ್. ಅಧ್ಯಕ್ಷ ಎ.ಬಿ. ನೇಮಗೌಡ ಹೇಳಿದರು.</p>.<p>ಕಿತ್ತೂರು ವಿಜಯೋತ್ಸವ ಅಂಗವಾಗಿ ಇಲ್ಲಿನ ಚನ್ನಮ್ಮ ವೃತ್ತದಲ್ಲಿ ಚನ್ನಮ್ಮ ಫೊಟೊಗೆ ಶುಕ್ರವಾರ ಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಬ್ರಿಟಿಷರ ಬಹು ದೊಡ್ಡ ಸೈನ್ಯದ ವಿರುದ್ಧ ಹೋರಾಡಿದದ ಆ ಮಹಿಳೆ ಇಡೀ ಜಗತ್ತಿನಾದ್ಯಂತ ವೀರ ರಾಣಿ ಎನಿಸಿದ್ದಾರೆ’ ಎಂದರು.</p>.<p>ಮುಖಂಡ ಶಿವಾನಂದ ಸಿಂಧೂರ, ‘ಸತತ ಮಳೆಯಿಂದ ಗೋವಿನ ಜೋಳ, ಕಬ್ಬು, ತೊಗರಿ, ದ್ರಾಕ್ಷಿ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ಮೆಕ್ಕೆಜೋಳ ತೆನೆಯಲ್ಲಿ ಮೊಳಕೆಗಳು ಬಂದಿವೆ. ಸರ್ಕಾರ ಅನ್ನದಾತನಿಗೆ ಸಮರ್ಪಕ ಬೆಳೆ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಶಿವನಿಂಗ ಅರಟಾಳ, ಅಪ್ಪಾಸಾಬ ಭೀ. ತೆಲಸಂಗ, ಶಿವಾನಂದ ಪಾಟೀಲ, ಅಣ್ಣಾರಾಯ ಹಾಲಳ್ಳಿ, ಈರಪ್ಪ ಅರಟಾಳ, ಶಂಕರ ಹಿಪ್ಪರಗಿ, ರಾಮು ಹಾಲಳ್ಳಿ, ಅಜೀತ ಜತ್ತಿ, ರವಿ ಹಾಲಳ್ಳಿ, ಮುಲಗೌಡ ಪಾಟೀಲ, ಅಪ್ಪಾಸಾಬ ಮದಬಾವಿ, ಸಿದ್ದು ಮುದಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>