ಶಿಕ್ಷಣದಿಂದ ಹೊರಗುಳಿದ ಬಾಲಕಿಯರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯಗಳಲ್ಲಿ ವಾರ್ಡನ್, ಮುಖ್ಯಶಿಕ್ಷಕರು, ಸಹಶಿಕ್ಷಕರು, ಅಕೌಂಟೆಂಟ್ಗಳು, ದೈಹಿಕ ಶಿಕ್ಷಣ ಶಿಕ್ಷಕರು 10–14 ವರ್ಷಗಳಿಂದಲೂ ಹೊರಗುತ್ತಿಗೆ ಮೂಲಕ ದುಡಿಯುತ್ತಿದ್ದಾರೆ. ಗುತ್ತಿಗೆಯ ಪದ್ಧತಿಯಡಿ ಅಭದ್ರತೆಯಲ್ಲಿ ಇರುವಂತಾಗಿದೆ. ಹೀಗಾಗಿ, ಕಾಯಂಗೊಳಿಸಬೇಕು. ಅಲ್ಲಿವರೆಗೆ ನೇರಗುತ್ತಿಗೆ ಮೂಲಕ ಸೇವೆಯನ್ನು ಮುಂದುವರಿಸಬೇಕು ಎಂದು ಕೆಜಿಬಿವಿ ಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಎನ್.ಎಸ್. ವೀರೇಶ ಒತ್ತಾಯಿಸಿದರು.