ಬೆಳಗಾವಿ: ಅಕ್ಕತಂಗೇರಹಾಳ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿ ಗ್ರಾಮಸ್ಥರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.
ಮುಖಂಡ ಬಸನಗೌಡ ಹೊಳೆಯಾಚಿ ಮಾತನಾಡಿ, ‘ನಮ್ಮ ಗ್ರಾಮ ಕೃಷಿ ಅವಲಂಬಿತವಾಗಿದೆ. ಪಟ್ಟಣವಾದರೆ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತದೆ. ರೈತರ ಮತ್ತು ಬಡವರ ಮಕ್ಕಳಿಗೆ ಗ್ರಾಮೀಣ ಕೃಪಾಂಕ ಮೊದಲಾದಶೈಕ್ಷಣಿಕ ಸೌಲಭ್ಯಗಳು ದೊರೆಯುವುದಿಲ್ಲ. ಇದರಿಂದ ಅವರ ಭವಿಷ್ಯಕ್ಕೆ ತೊಂದರೆ ಆಗುತ್ತದೆ. ಹೀಗಾಗಿ, ಪ್ರಸ್ತಾವ ಕೈಬಿಟ್ಟು ನಮಗೆ ಅನುಕೂಲ ಮಾಡಿಕೊಡಬೇಕು’ ಎಂದು ಒತ್ತಾಯಿಸಿದರು.