ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿಯವರೇ ನಿದ್ರೆಯಿಂದ ಎಚ್ಚರಗೊಳ್ಳಿ: ಪ್ರತಿಭಟನಾಕಾರರಿಂದ ಘೋಷಣೆ

Last Updated 8 ಜನವರಿ 2020, 14:38 IST
ಅಕ್ಷರ ಗಾತ್ರ

ಅಥಣಿ: ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಇಲ್ಲಿ ಕಾರ್ಮಿಕರು ಬುಧವಾರ ಪ್ರತಿಭಟನೆ ನಡೆಸಿದರು.

ಕಾರ್ಮಿಕ ಸಂಘಟನೆಗಳು, ಆಶಾ ಕಾರ್ಯಕರ್ತೆಯರು, ವಿಮಾ ನೌಕರ ಸಂಘದವರು ಡಾ.ಬಿ.ಆರ್. ಅಂಬೇಡ್ಕರ್‌ ವೃತ್ತದ ಬಳಿ ರಸ್ತೆ ತಡೆದು ಪ್ರತಿಭಟಿಸಿದರು. ಪ್ರಧಾನಿ ನರೇಂದ್ರ ಮೋದಿ ಫೋಟೊ ಪ್ರದರ್ಶಿಸಿ, ಸಿಳ್ಳೆ ಹಾಕುವ ಮೂಲಕ ‘ಮೋದಿಯವರೇ ನಿದ್ರೆಯಿಂದ ಎಚ್ಚರಗೊಳ್ಳಿ’ ಎಂದು ಘೋಷಣೆ ಕೂಗಿದರು.

ಸ್ಥಳಕ್ಕೆ ಬಂದ ಶಾಸಕ ಮಹೇಶ ಕುಮಠಳ್ಳಿ, ‘ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಗಮನಸೆಳೆಯುತ್ತೇನೆ’ ಎಂದು ಭರವಸೆ ನೀಡಿದರು.

ಮುಖಂಡರಾದ ಬಸನಗೌಡ ಪಾಟೀಲ, ಮಂಜು ಹೋಳಿಕಟ್ಟಿ, ಮಂಜುನಾಥ ಬಾಡಗಿ, ದೀಪಕ ಶಿಂಧೆ, ರೈತ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ಮಹಾದೇವ ಮಡಿವಾಳ, ಸಂಧ್ಯಾ ಅಂಬೇಕರ, ವಿಶಾಲ ದೊಡಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT