ಇದಕ್ಕೂ ಮುಂಚೆ, ಪಂಚಾಯ್ತಿ ಕಚೇರಿಗೆ ಹಾಕಿದ್ದ ಬೀಗವನ್ನು ತೆಗೆಯಲು ಬಂದಿದ್ದ ತಹಶೀಲ್ದಾರ್ ಅವರ ಕಾರಿಗೆ ಜನರು ಘೇರಾವ್ ಹಾಕಿ ಉಗ್ರ ಪ್ರತಿಭಟನೆ ನಡೆಸಿದರು. ನೀರು ಪೂರೈಸುವ ನೆಪದಲ್ಲಿ ಅನಾವಶ್ಯಕವಾಗಿ ಪಂಚಾಯ್ತಿ ಹಣವನ್ನು ಖರ್ಚು ಮಾಡಲಾಗುತ್ತಿದೆ. ಇದರಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆದಿದ್ದು, ಇದರಲ್ಲಿ ಭಾಗಿಯಾಗಿರುವ ಪಂಚಾಯ್ತಿ ಸದಸ್ಯರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.