ಸಂಘದ ಅಧ್ಯಕ್ಷ ನೇತಾಜಿ ಜಾಧವ ಮಾತನಾಡಿ, ‘ಜಿಲ್ಲಾಡಳಿತ ಕೆಲ ದಿನಗಳ ಹಿಂದೆ ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸದಂತೆ ಎಚ್ಚರಿಕೆ ನೀಡುತ್ತಿದೆ.ತಯಾರಕರು ಈಗಾಗಲೇ ಗಣೇಶ ಮೂರ್ತಿಗಳನ್ನು ತಯಾರಿಸಿದ್ದಾರೆ. ನಿಷೇಧಿಸುವುದಾದರೇ ಮೂರ್ನಾಲ್ಕು ತಿಂಗಳ ಹಿಂದೆಯೇ ಈ ಬಗ್ಗೆ ತಿಳಿಹೇಳಬೇಕಾಗಿತ್ತು. ಬಹುತೇಕ ತಯಾರಿಕರು ಲಕ್ಷಾಂತರ ರೂಪಾಯಿ ವೆಚ್ಚದ ಮೂರ್ತಿಗಳನ್ನು ಈಗಾಗಲೇ ತಯಾರಿಸಿದ್ದು, ಬಣ್ಣ ಮಾಡುವುದು ಮಾತ್ರ ಬಾಕಿ ಇದೆ. ಮೂರ್ತಿಗಳನ್ನು ನಿಷೇಧ ಮಾಡುವುದರಿಂದ ತಯಾರಕರಿಗೆ ನಷ್ಟ ಉಂಟಾಗುತ್ತದೆ’ ಎಂದು ಅಳಲು ತೋಡಿಕೊಂಡರು.