<p><strong>ಅಥಣಿ</strong>: ‘ಸಮುದಾಯದ ಹಿನ್ನಡೆ ಸಮುದಾಯದವರಿಂದಲೇ ಆಗುತ್ತಿದೆ. ಇದನ್ನು ಬಿಟ್ಟು ನಾವೆಲ್ಲರೂ ಒಗ್ಗಟ್ಟಾಗಬೇಕು. ಸಮಾಜದ ಏಳಿಗೆಗಾಗಿ ಹೋರಾಡಬೇಕು’ ಎಂದು ಅಖಿಲ ಕರ್ನಾಟಕ ಅಂಬಿಗರ ಚೌಡಯ್ಯ ಮಹಾಸಭಾ ಅಧ್ಯಕ್ಷೆ ಅಂಬಿಕಾ ಜಾಲಗಾರ ಹೇಳಿದರು.</p>.<p>ಇಲ್ಲಿನ ಶಿವಣಗಿ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಇದ್ದಾಗ ₹ 32 ಕೋಟಿ ಹಾಗೂ ಈಗ ಬಿ.ಎಸ್. ಯಡಿಯೂರಪ್ಪ ಅವರು ₹ 5 ಕೋಟಿ ಅನುದಾನವನ್ನು ಸಮಾಜದ ಅಭಿವೃದ್ಧಿಗಾಗಿ ಘೋಷಣೆ ಮಾಡಿದ್ದಾರೆ. ಅದನ್ನು ಉಪಯೋಗಿಸಿಕೊಳ್ಳುವಲ್ಲಿ ಸಮುದಾಯದ ನಾಯಕರು ವಿಫಲವಾಗಿದ್ದಾರೆ. ಮುಖ್ಯವಾಹಿನಿಗೆ ಬರಲು ಸಿಗಬೇಕಾದ ಸೌಲಭ್ಯಗಳು ದೊರೆಯದಂಂತಾಗಿದೆ’ ಎಂದು ದೂರಿದರು.</p>.<p>ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ರಾಜು ಜಮಖಂಡಿಕರ, ‘ನಮ್ಮ ಸಮುದಾಯದ ಜನರನ್ನು ನಮ್ಮ ನಾಯಕರೇ ಮೋಸ ಮಾಡುತ್ತಿದ್ದಾರೆ. ಅದು ಅಥಣಿಯಲ್ಲಿಯೂ ಆಗುತ್ತಿದೆ. ನಾವೆಲ್ಲರೂ ಸೇರಿ ಶರಣರ ಜಯಂತಿ ಆಚರಣೆ ಮಾಡುತ್ತಿದ್ದೇವೆ. ಆದರೆ, ಕೆಲವರು ಈ ಕಾರ್ಯಕ್ರಮಕ್ಕೆ ಹೋಗಬೇಡಿ ಎಂದು ಸಮುದಾಯದವರಿಗೆ ಕರೆ ಮಾಡಿ ಹೇಳಿದ್ದಾರೆ’ ಎಂದು ಆರೋಪಿಸಿದರು.</p>.<p>ಇದಕ್ಕೂ ಮುನ್ನ, ಅಂಬಿಗರ ಚೌಡಯ್ಯ ವೃತ್ತದಿಂದ ಚೌಡಯ್ಯ ಭಾವಚಿತ್ರದ ಮೆರವಣಿಗೆ ನಡೆಯಿತು.</p>.<p>ಕವಲಗುಡ್ಡದ ಸಿದ್ಧಯೋಗಿ ಅಮರೇಶ್ವರ ಮಹಾರಾಜ, ಉಪ ತಹಶೀಲ್ದಾರ್ ರಾಜು ಡವಳೇಶ್ವರ, ಮುಖಂಡರಾದ ಅಣ್ಣಪ್ಪ ತಳವಾರ, ಜಯಶ್ರೀ ಪೂಜಾರಿ, ಲಕ್ಷ್ಮಿ ನಾಟೇಕರ, ಅಡಿವೆಪ್ಪ ಕೋಳಿ, ಮೋಹನ ಸಲಗರ್, ವಿಜಯ ಕಾಯಪಲ್ಲೆ, ರವಿ ಪೂಜಾರಿ, ಮಲ್ಲು ಗಸ್ತಿ, ರಾಯಪ್ಪ ತಳವಾರ, ಇಂದುಮತಿ ಉತ್ತೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ</strong>: ‘ಸಮುದಾಯದ ಹಿನ್ನಡೆ ಸಮುದಾಯದವರಿಂದಲೇ ಆಗುತ್ತಿದೆ. ಇದನ್ನು ಬಿಟ್ಟು ನಾವೆಲ್ಲರೂ ಒಗ್ಗಟ್ಟಾಗಬೇಕು. ಸಮಾಜದ ಏಳಿಗೆಗಾಗಿ ಹೋರಾಡಬೇಕು’ ಎಂದು ಅಖಿಲ ಕರ್ನಾಟಕ ಅಂಬಿಗರ ಚೌಡಯ್ಯ ಮಹಾಸಭಾ ಅಧ್ಯಕ್ಷೆ ಅಂಬಿಕಾ ಜಾಲಗಾರ ಹೇಳಿದರು.</p>.<p>ಇಲ್ಲಿನ ಶಿವಣಗಿ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಇದ್ದಾಗ ₹ 32 ಕೋಟಿ ಹಾಗೂ ಈಗ ಬಿ.ಎಸ್. ಯಡಿಯೂರಪ್ಪ ಅವರು ₹ 5 ಕೋಟಿ ಅನುದಾನವನ್ನು ಸಮಾಜದ ಅಭಿವೃದ್ಧಿಗಾಗಿ ಘೋಷಣೆ ಮಾಡಿದ್ದಾರೆ. ಅದನ್ನು ಉಪಯೋಗಿಸಿಕೊಳ್ಳುವಲ್ಲಿ ಸಮುದಾಯದ ನಾಯಕರು ವಿಫಲವಾಗಿದ್ದಾರೆ. ಮುಖ್ಯವಾಹಿನಿಗೆ ಬರಲು ಸಿಗಬೇಕಾದ ಸೌಲಭ್ಯಗಳು ದೊರೆಯದಂಂತಾಗಿದೆ’ ಎಂದು ದೂರಿದರು.</p>.<p>ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ರಾಜು ಜಮಖಂಡಿಕರ, ‘ನಮ್ಮ ಸಮುದಾಯದ ಜನರನ್ನು ನಮ್ಮ ನಾಯಕರೇ ಮೋಸ ಮಾಡುತ್ತಿದ್ದಾರೆ. ಅದು ಅಥಣಿಯಲ್ಲಿಯೂ ಆಗುತ್ತಿದೆ. ನಾವೆಲ್ಲರೂ ಸೇರಿ ಶರಣರ ಜಯಂತಿ ಆಚರಣೆ ಮಾಡುತ್ತಿದ್ದೇವೆ. ಆದರೆ, ಕೆಲವರು ಈ ಕಾರ್ಯಕ್ರಮಕ್ಕೆ ಹೋಗಬೇಡಿ ಎಂದು ಸಮುದಾಯದವರಿಗೆ ಕರೆ ಮಾಡಿ ಹೇಳಿದ್ದಾರೆ’ ಎಂದು ಆರೋಪಿಸಿದರು.</p>.<p>ಇದಕ್ಕೂ ಮುನ್ನ, ಅಂಬಿಗರ ಚೌಡಯ್ಯ ವೃತ್ತದಿಂದ ಚೌಡಯ್ಯ ಭಾವಚಿತ್ರದ ಮೆರವಣಿಗೆ ನಡೆಯಿತು.</p>.<p>ಕವಲಗುಡ್ಡದ ಸಿದ್ಧಯೋಗಿ ಅಮರೇಶ್ವರ ಮಹಾರಾಜ, ಉಪ ತಹಶೀಲ್ದಾರ್ ರಾಜು ಡವಳೇಶ್ವರ, ಮುಖಂಡರಾದ ಅಣ್ಣಪ್ಪ ತಳವಾರ, ಜಯಶ್ರೀ ಪೂಜಾರಿ, ಲಕ್ಷ್ಮಿ ನಾಟೇಕರ, ಅಡಿವೆಪ್ಪ ಕೋಳಿ, ಮೋಹನ ಸಲಗರ್, ವಿಜಯ ಕಾಯಪಲ್ಲೆ, ರವಿ ಪೂಜಾರಿ, ಮಲ್ಲು ಗಸ್ತಿ, ರಾಯಪ್ಪ ತಳವಾರ, ಇಂದುಮತಿ ಉತ್ತೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>