<p><strong>ಬೆಳಗಾವಿ: ‘</strong>ಸಮಾಜಮುಖಿ ಕೆಲಸ ನಿರ್ವಹಿಸುತ್ತಾ ಬರುತ್ತಿರುವ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಜಿಲ್ಲೆಗೆ ಎರಡು ಆಂಬುಲೆನ್ಸ್ಗಳನ್ನು ನೀಡಿದ್ದಾರೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹುಕ್ಕೇರಿ ಹಿರೇಮಠದ ಪ್ರತಿಷ್ಠಾನದಿಂದ ಶುಕ್ರವಾರ ಜಿಲ್ಲಾಡಳಿತಕ್ಕೆ ನೀಡಲಾದ ಆಂಬುಲೆನ್ಸ್ಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದರು.</p>.<p>‘ವಿಶ್ವವನ್ನೇ ತಲ್ಲಣ ಮೂಡಿಸಿರುವ ಕೊರೊನಾ ಸೋಂಕಿನಿಂದ ಸಾವು–ನೋವುಗಳು ಹೆಚ್ಚಾಗುತ್ತಿವೆ. ಆರ್ಥಿಕ ಪರಿಸ್ಥಿತಿಯೂ ಕುಸಿದಿದೆ. ಈ ವೇಳೆ ಮಠ ನೆರವಾಗಿರುವುದು ಶ್ಲಾಘನೀಯ’ ಎಂದರು.</p>.<p>ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ, ‘ಹುಕ್ಕೇರಿ ಹಿರೇಮಠ ಜಿಲ್ಲೆಗೆ ಆದರ್ಶ ಮಠವಾಗಿದೆ’ ಎಂದರು.</p>.<p>ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ನಗರ ಹಾಗೂ ಹುಕ್ಕೇರಿ ತಾಲ್ಲೂಕಿನ ಜನರ ಅನಕೂಲಕ್ಕಾಗಿ ಆಂಬುಲೆನ್ಸ್ಗಳನ್ನು ನೀಡಲಾಗಿದೆ. ಕೋವಿಡ್-19 ಎರಡನೇ ಅಲೆ ಭೀಕರವಾಗಿದೆ. ಹಿರೇಮಠದ ಗುರುಶಾಂತೇಶ್ವರ ಜಾತ್ರಾ ಮಹೋತ್ಸವ ಬಿಟ್ಟು ಜನರ ಸೇವೆ ಮಾಡಲಾಗುತ್ತಿದೆ’ ಎಂದು ಹೇಳಿದರು.</p>.<p>‘ಮದುವೆಯಲ್ಲಿ ಜನ ಸೇರಿಸದಂತೆ ಸರ್ಕಾರ ಆದೇಶ ಹೊರಡಿಸಿದೆ. ಮದುವೆ ಮಾಡಿ. ಆದರೆ, ಹಸಿದ ಜನರಿಗೆ ಅನ್ನದಾನ ಮಾಡಿ’ ಎಂದರು.</p>.<p>‘ಹಿರೇಮಠದಿಂದ ಕೋವಿಡ್ ಮೊದಲನೇ ಅಲೆಯಲ್ಲಿ ₹ 12 ಲಕ್ಷ ಮೌಲ್ಯದ ಆಹಾರದ ಕಿಟ್ಗಳನ್ನು ಒದಗಿಸಲಾಗಿದೆ. ನೆರೆ ಬಂದಾಗಲೂ ಶ್ರೀಮಠ ಜನರ ಸೇವೆ ಮಾಡಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಹಳ್ಳಿಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ವೈದ್ಯರು ಹೆಚ್ಚು ಹಳ್ಳಿ ಕಡೆ ಹೋಗಿ ಜನರ ಪ್ರಾಣ ಉಳಿಸುವ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಡಿಎಚ್ಒ ಡಾ.ಎಸ್.ವಿ. ಮುನ್ಯಾಳ, ಬುಡಾ ಎಂಜಿನಿಯರ್ ಮಹಾಂತೇಶ ಹಿರೇಮಠ, ವೀರೇಶ ಹಿರೇಮಠ,ಅರುಣ ಐಹೊಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: ‘</strong>ಸಮಾಜಮುಖಿ ಕೆಲಸ ನಿರ್ವಹಿಸುತ್ತಾ ಬರುತ್ತಿರುವ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಜಿಲ್ಲೆಗೆ ಎರಡು ಆಂಬುಲೆನ್ಸ್ಗಳನ್ನು ನೀಡಿದ್ದಾರೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹುಕ್ಕೇರಿ ಹಿರೇಮಠದ ಪ್ರತಿಷ್ಠಾನದಿಂದ ಶುಕ್ರವಾರ ಜಿಲ್ಲಾಡಳಿತಕ್ಕೆ ನೀಡಲಾದ ಆಂಬುಲೆನ್ಸ್ಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದರು.</p>.<p>‘ವಿಶ್ವವನ್ನೇ ತಲ್ಲಣ ಮೂಡಿಸಿರುವ ಕೊರೊನಾ ಸೋಂಕಿನಿಂದ ಸಾವು–ನೋವುಗಳು ಹೆಚ್ಚಾಗುತ್ತಿವೆ. ಆರ್ಥಿಕ ಪರಿಸ್ಥಿತಿಯೂ ಕುಸಿದಿದೆ. ಈ ವೇಳೆ ಮಠ ನೆರವಾಗಿರುವುದು ಶ್ಲಾಘನೀಯ’ ಎಂದರು.</p>.<p>ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ, ‘ಹುಕ್ಕೇರಿ ಹಿರೇಮಠ ಜಿಲ್ಲೆಗೆ ಆದರ್ಶ ಮಠವಾಗಿದೆ’ ಎಂದರು.</p>.<p>ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ನಗರ ಹಾಗೂ ಹುಕ್ಕೇರಿ ತಾಲ್ಲೂಕಿನ ಜನರ ಅನಕೂಲಕ್ಕಾಗಿ ಆಂಬುಲೆನ್ಸ್ಗಳನ್ನು ನೀಡಲಾಗಿದೆ. ಕೋವಿಡ್-19 ಎರಡನೇ ಅಲೆ ಭೀಕರವಾಗಿದೆ. ಹಿರೇಮಠದ ಗುರುಶಾಂತೇಶ್ವರ ಜಾತ್ರಾ ಮಹೋತ್ಸವ ಬಿಟ್ಟು ಜನರ ಸೇವೆ ಮಾಡಲಾಗುತ್ತಿದೆ’ ಎಂದು ಹೇಳಿದರು.</p>.<p>‘ಮದುವೆಯಲ್ಲಿ ಜನ ಸೇರಿಸದಂತೆ ಸರ್ಕಾರ ಆದೇಶ ಹೊರಡಿಸಿದೆ. ಮದುವೆ ಮಾಡಿ. ಆದರೆ, ಹಸಿದ ಜನರಿಗೆ ಅನ್ನದಾನ ಮಾಡಿ’ ಎಂದರು.</p>.<p>‘ಹಿರೇಮಠದಿಂದ ಕೋವಿಡ್ ಮೊದಲನೇ ಅಲೆಯಲ್ಲಿ ₹ 12 ಲಕ್ಷ ಮೌಲ್ಯದ ಆಹಾರದ ಕಿಟ್ಗಳನ್ನು ಒದಗಿಸಲಾಗಿದೆ. ನೆರೆ ಬಂದಾಗಲೂ ಶ್ರೀಮಠ ಜನರ ಸೇವೆ ಮಾಡಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಹಳ್ಳಿಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ವೈದ್ಯರು ಹೆಚ್ಚು ಹಳ್ಳಿ ಕಡೆ ಹೋಗಿ ಜನರ ಪ್ರಾಣ ಉಳಿಸುವ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಡಿಎಚ್ಒ ಡಾ.ಎಸ್.ವಿ. ಮುನ್ಯಾಳ, ಬುಡಾ ಎಂಜಿನಿಯರ್ ಮಹಾಂತೇಶ ಹಿರೇಮಠ, ವೀರೇಶ ಹಿರೇಮಠ,ಅರುಣ ಐಹೊಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>