<p><strong>ಚನ್ನಮ್ಮನ ಕಿತ್ತೂರು:</strong> ಉಸಿರಾಟದ ತೊಂದರೆಯಿಂದಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾದ ತಾಲ್ಲೂಕಿನ ಶಿವನೂರು ಗ್ರಾಮದ ಯೋಧ ವಿಜಯ ಬ.ಹುಬ್ಬಳ್ಳಿ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವದೊಂದಿಗೆ ಗ್ರಾಮದ ರುದ್ರಭೂಮಿಯಲ್ಲಿ ಗುರುವಾರ ನಡೆಯಿತು.</p>.<p>‘ಸಶಸ್ತ್ರ 16ನೇ ಪಡೆಯಲ್ಲಿ ಹವಾಲ್ದಾರ್ ಆಗಿದ್ದ ಅವರಿಗೆ ಕೆಲವು ತಿಂಗಳುಗಳ ಹಿಂದೆ ತಲೆಗೆ ಏಟಾಗಿತ್ತು. ಚೇತರಿಸಿಕೊಂಡು ಅವರು ಕರ್ತವ್ಯಕ್ಕೆ ಹಾಜರಾಗಿದ್ದರು. ಮತ್ತೆ ಅನಾರೋಗ್ಯ ಕಾಡಿದ್ದರಿಂದ ಆರು ದಿನಗಳ ಹಿಂದೆ ಊರಿಗೆ ಬಂದಿದ್ದರು’ ಎಂದು ಗ್ರಾಮಸ್ಥರು ತಿಳಿಸಿದರು.</p>.<p>ಗುರುವಾರ ಬೆಳಿಗ್ಗೆ ಇಲ್ಲಿಯ ಚನ್ನಮ್ಮ ವರ್ತುಲದಿಂದ ಸ್ವಗ್ರಾಮ ಶಿವನೂರುವರೆಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು.ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಅಲ್ಲಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೃತ ಯೋಧನ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿತ್ತು. </p>.<p>ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಆಡಳಿತ ಮಂಡಳಿಯವರು, ಮಾಜಿ ಯೋಧರು, ಶಿವನೂರು ಸೇರಿ ಸುತ್ತಲಿನ ಗ್ರಾಮಗಳ ಸಾರ್ವಜನಿಕರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.</p>.<p>ಮೃತ ಯೋಧ ವಿಜಯ ಅವರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಮ್ಮನ ಕಿತ್ತೂರು:</strong> ಉಸಿರಾಟದ ತೊಂದರೆಯಿಂದಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾದ ತಾಲ್ಲೂಕಿನ ಶಿವನೂರು ಗ್ರಾಮದ ಯೋಧ ವಿಜಯ ಬ.ಹುಬ್ಬಳ್ಳಿ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವದೊಂದಿಗೆ ಗ್ರಾಮದ ರುದ್ರಭೂಮಿಯಲ್ಲಿ ಗುರುವಾರ ನಡೆಯಿತು.</p>.<p>‘ಸಶಸ್ತ್ರ 16ನೇ ಪಡೆಯಲ್ಲಿ ಹವಾಲ್ದಾರ್ ಆಗಿದ್ದ ಅವರಿಗೆ ಕೆಲವು ತಿಂಗಳುಗಳ ಹಿಂದೆ ತಲೆಗೆ ಏಟಾಗಿತ್ತು. ಚೇತರಿಸಿಕೊಂಡು ಅವರು ಕರ್ತವ್ಯಕ್ಕೆ ಹಾಜರಾಗಿದ್ದರು. ಮತ್ತೆ ಅನಾರೋಗ್ಯ ಕಾಡಿದ್ದರಿಂದ ಆರು ದಿನಗಳ ಹಿಂದೆ ಊರಿಗೆ ಬಂದಿದ್ದರು’ ಎಂದು ಗ್ರಾಮಸ್ಥರು ತಿಳಿಸಿದರು.</p>.<p>ಗುರುವಾರ ಬೆಳಿಗ್ಗೆ ಇಲ್ಲಿಯ ಚನ್ನಮ್ಮ ವರ್ತುಲದಿಂದ ಸ್ವಗ್ರಾಮ ಶಿವನೂರುವರೆಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು.ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಅಲ್ಲಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೃತ ಯೋಧನ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿತ್ತು. </p>.<p>ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಆಡಳಿತ ಮಂಡಳಿಯವರು, ಮಾಜಿ ಯೋಧರು, ಶಿವನೂರು ಸೇರಿ ಸುತ್ತಲಿನ ಗ್ರಾಮಗಳ ಸಾರ್ವಜನಿಕರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.</p>.<p>ಮೃತ ಯೋಧ ವಿಜಯ ಅವರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>