ಉಗರಗೋಳ (ಸವದತ್ತಿ ತಾ.): ‘ಸವದತ್ತಿ–ಯಲ್ಲಮ್ಮ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡು, ರೈತರು, ಬಡವರು, ಮಧ್ಯಮ ವರ್ಗ ಮತ್ತು ಎಲ್ಲ ವರ್ಗಗಳ ಜನರ ಸಂಕಷ್ಟಕ್ಕೆ ಸ್ಪಂದಿಸಿರುವ ಶಾಸಕ ಆನಂದ ಮಾಮನಿ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಉಗರಗೋಳ ಶ್ರೀಗುರು ನಿರ್ವಾಣೇಶ್ವರ ಮಠದ ಪೀಠಾಧಿಪತಿ ಗುರುಮಹಾಂತ ದೇವರು ಒತ್ತಾಯಿಸಿದ್ದಾರೆ.