ಕೃಷಿಗೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಿರುವ ಮೂರು ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ವಿದ್ಯುತ್ ಮಸೂದೆ–2020 ಹಿಂಪಡೆಯಬೇಕು. ಎಲ್ಲ ರೀತಿಯ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು. ಬಡ ಕುಟುಂಬದ ಪ್ರತಿಯೊಬ್ಬರಿಗೂ ಪ್ರತಿ ತಿಂಗಳು ತಲಾ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ಕೊಡಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ವಾರ್ಷಿಕ 200 ದಿನಗಳು ಉದ್ಯೋಗ ಕೊಡಬೇಕು. ದಿನಕ್ಕೆ ₹ 200 ಕೂಲಿ ಕೊಡಬೇಕು. ನಗರ ಪ್ರದೇಶದವರಿಗೂ ಈ ಯೋಜನೆ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.