<p><strong>ಬೆಳಗಾವಿ: </strong>ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಪತಿ,ಉದ್ಯಮಿ ಆಣ್ಣಾಸಾಹೇಬ ಜೊಲ್ಲೆ ಬುಧವಾರ ಚಿಕ್ಕೋಡಿಯ ಮಿನಿ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು. ಆದರೆ, ಟಿಕೆಟ್ ಆಕಾಂಕ್ಷಿಯಾಗಿದ್ದ ರಮೇಶ್ ಕತ್ತಿ ಗೈರಾಗಿದ್ದರು.</p>.<p>ಶಾಸಕರಾದ ಕೆ.ಎಸ್. ಈಶ್ವರಪ್ಪ, ಡಿ.ಎಂ. ಐಹೊಳೆ, ಪಿ. ರಾಜೀವ,ಶಶಿಕಲಾ ಜೊಲ್ಲೆ, ವಿಧಾನಪರಿಷತ್ ವಿರೋಧಪಕ್ಷದ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಚಿಕ್ಕೋಡಿ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ ಮೊದಲಾದವರು ನಾಮಪತ್ರ ಸಲ್ಲಿಕೆ ವೇಳೆ ಜತೆಯಲ್ಲಿದ್ದರು.</p>.<p>ಟಿಕೆಟ್ ಕೈತಪ್ಪಿದ್ದರಿಂದ ರಮೇಶ್ ಕತ್ತಿ ಬೇಸರಗೊಂಡಿದ್ದಾರೆ. ಹೀಗಾಗಿ ಜೊಲ್ಲೆ ನಾಮಪತ್ರ ಸಲ್ಲಿಕೆ ವೇಳೆ ಅವರು ಹಾಜರಿರಲಿಲ್ಲ.ಅವರ ಸಹೋದರ, ಶಾಸಕ ಉಮೇಶ ಕತ್ತಿ ಕೂಡ ವಿಳಂಬವಾಗಿ ಬಂದು ನಾಯಕರನ್ನು ಸೇರಿಸಿಕೊಂಡರು.</p>.<p>‘ಬುಧವಾರ ಸಂಜೆಚಿಕ್ಕೋಡಿ ಪಟ್ಟಣದಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಕತ್ತಿ ಸಹೋದರರು ಭಾಗವಹಿಸಲಿದ್ದಾರೆ. ಎಲ್ಲರೂ ಕೂಡಿ ಕೆಲಸ ಮಾಡಿ ಪಕ್ಷದ ಅಭ್ಯರ್ಥಿ ಗೆಲ್ಲಿಸುತ್ತಾರೆ ’ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಅವರು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಪತಿ,ಉದ್ಯಮಿ ಆಣ್ಣಾಸಾಹೇಬ ಜೊಲ್ಲೆ ಬುಧವಾರ ಚಿಕ್ಕೋಡಿಯ ಮಿನಿ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು. ಆದರೆ, ಟಿಕೆಟ್ ಆಕಾಂಕ್ಷಿಯಾಗಿದ್ದ ರಮೇಶ್ ಕತ್ತಿ ಗೈರಾಗಿದ್ದರು.</p>.<p>ಶಾಸಕರಾದ ಕೆ.ಎಸ್. ಈಶ್ವರಪ್ಪ, ಡಿ.ಎಂ. ಐಹೊಳೆ, ಪಿ. ರಾಜೀವ,ಶಶಿಕಲಾ ಜೊಲ್ಲೆ, ವಿಧಾನಪರಿಷತ್ ವಿರೋಧಪಕ್ಷದ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಚಿಕ್ಕೋಡಿ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ ಮೊದಲಾದವರು ನಾಮಪತ್ರ ಸಲ್ಲಿಕೆ ವೇಳೆ ಜತೆಯಲ್ಲಿದ್ದರು.</p>.<p>ಟಿಕೆಟ್ ಕೈತಪ್ಪಿದ್ದರಿಂದ ರಮೇಶ್ ಕತ್ತಿ ಬೇಸರಗೊಂಡಿದ್ದಾರೆ. ಹೀಗಾಗಿ ಜೊಲ್ಲೆ ನಾಮಪತ್ರ ಸಲ್ಲಿಕೆ ವೇಳೆ ಅವರು ಹಾಜರಿರಲಿಲ್ಲ.ಅವರ ಸಹೋದರ, ಶಾಸಕ ಉಮೇಶ ಕತ್ತಿ ಕೂಡ ವಿಳಂಬವಾಗಿ ಬಂದು ನಾಯಕರನ್ನು ಸೇರಿಸಿಕೊಂಡರು.</p>.<p>‘ಬುಧವಾರ ಸಂಜೆಚಿಕ್ಕೋಡಿ ಪಟ್ಟಣದಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಕತ್ತಿ ಸಹೋದರರು ಭಾಗವಹಿಸಲಿದ್ದಾರೆ. ಎಲ್ಲರೂ ಕೂಡಿ ಕೆಲಸ ಮಾಡಿ ಪಕ್ಷದ ಅಭ್ಯರ್ಥಿ ಗೆಲ್ಲಿಸುತ್ತಾರೆ ’ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಅವರು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>