<p><strong>ಬೆಳಗಾವಿ:</strong> ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ. ‘ವೈದ್ಯರ ನಿರ್ಲಕ್ಷ್ಯವೇ ಘಟನೆಗೆ ಕಾರಣ’ ಎಂಬ ಆರೋಪ ಪಾಲಕರಿಂದ ಕೇಳಿಬಂದಿದೆ.</p><p>ಹುಕ್ಕೇರಿ ತಾಲ್ಲೂಕಿನ ಗೌಡವಾಡ ಗ್ರಾಮದ ವೈಶಾಲಿ ಕೊಟಬಾಗಿ ಮೃತ ಮಹಿಳೆ.</p><p>'ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್ ಗೆ ವೈಶಾಲಿ ಅವರನ್ನು ಶನಿವಾರ ದಾಖಲಿಸಿದ್ದೆವು. ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿದ್ದು, ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದಾರೆ. ಭಾನುವಾರ ಬೆಳಿಗ್ಗೆ 7 ಗಂಟೆಯವರೆಗೆ ಆರೋಗ್ಯ ಸ್ಥಿರವಾಗಿತ್ತು. ನಂತರ ಎದೆನೋವು ಕಾಣಿಸಿಕೊಂಡಿತು. ಸಕಾಲಕ್ಕೆ ವೈದ್ಯರು ಚಿಕಿತ್ಸೆ ನೀಡಲು ಬರಲಿಲ್ಲ. ತುರ್ತು ನಿಗಾ ಘಟಕಕ್ಕೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು' ಎಂದು ಅತ್ತೆ ಈರವ್ವ ಆರೋಪಿಸಿದರು.</p><p>'ಭಾನುವಾರ ಬೆಳಿಗ್ಗೆಯವರೆಗೂ ವೈಶಾಲಿ ಆರೋಗ್ಯ ಸ್ಥಿರವಾಗಿತ್ತು. ಎದೆನೋವು ಬಂದ ತಕ್ಷಣ, ವೈದ್ಯರು ಚಿಕಿತ್ಸೆ ಕೊಟ್ಟಿದ್ದಾರೆ. ಬಾಣಂತಿ ಜೀವ ಉಳಿಸಲು ಪ್ರಯತ್ನಿಸಿದ್ದಾರೆ. ಆದರೆ, ಹೃದಯ ಸಂಬಂಧಿ ಸಮಸ್ಯೆಯಿಂದ ಅವರು ಮೃತಪಟ್ಟಿದ್ದಾರೆ' ಎಂದು ಬಿಮ್ಸ್ ನಿರ್ದೇಶಕ ಡಾ.ಅಶೋಕಕುಮಾರ ಶೆಟ್ಟಿ ಹೇಳಿದರು.</p><p>'ರೋಗಿಗಳ ಕುಟುಂಬದವರು ಮಾಡಿದ ಆರೋಪದ ಕುರಿತಾಗಿ ತನಿಖೆಗೆ ಆದೇಶಿಸಿದ್ದೇನೆ. ವೈದ್ಯರು ತಪ್ಪು ಎಸಗಿರುವುದು ಸಾಬೀತಾದರೆ, ಶಿಸ್ತು ಕ್ರಮ ಜರುಗಿಸಲಾಗುವುದು' ಎಂದರು.</p><p>ಎಪಿಎಂಸಿ ಠಾಣೆ ಪೊಲೀಸರು ಆಸ್ಪತ್ರೆಗೆ ಆಗಮಿಸಿ ಪರಿಶೀಲಿಸಿದರು. ಎರಡು ದಿನಗಳ ಹಿಂದಷ್ಟೇ ವೈಶಾಲಿ ಸಂಭ್ರಮದಿಂದ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಈಗ ಸಾವನ್ನಪ್ಪಿದ್ದರಿಂದ ಅವರ ಕುಟುಂಬದಲ್ಲಿ ನೀರವ ಮೌನ ಆವರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ. ‘ವೈದ್ಯರ ನಿರ್ಲಕ್ಷ್ಯವೇ ಘಟನೆಗೆ ಕಾರಣ’ ಎಂಬ ಆರೋಪ ಪಾಲಕರಿಂದ ಕೇಳಿಬಂದಿದೆ.</p><p>ಹುಕ್ಕೇರಿ ತಾಲ್ಲೂಕಿನ ಗೌಡವಾಡ ಗ್ರಾಮದ ವೈಶಾಲಿ ಕೊಟಬಾಗಿ ಮೃತ ಮಹಿಳೆ.</p><p>'ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್ ಗೆ ವೈಶಾಲಿ ಅವರನ್ನು ಶನಿವಾರ ದಾಖಲಿಸಿದ್ದೆವು. ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿದ್ದು, ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದಾರೆ. ಭಾನುವಾರ ಬೆಳಿಗ್ಗೆ 7 ಗಂಟೆಯವರೆಗೆ ಆರೋಗ್ಯ ಸ್ಥಿರವಾಗಿತ್ತು. ನಂತರ ಎದೆನೋವು ಕಾಣಿಸಿಕೊಂಡಿತು. ಸಕಾಲಕ್ಕೆ ವೈದ್ಯರು ಚಿಕಿತ್ಸೆ ನೀಡಲು ಬರಲಿಲ್ಲ. ತುರ್ತು ನಿಗಾ ಘಟಕಕ್ಕೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು' ಎಂದು ಅತ್ತೆ ಈರವ್ವ ಆರೋಪಿಸಿದರು.</p><p>'ಭಾನುವಾರ ಬೆಳಿಗ್ಗೆಯವರೆಗೂ ವೈಶಾಲಿ ಆರೋಗ್ಯ ಸ್ಥಿರವಾಗಿತ್ತು. ಎದೆನೋವು ಬಂದ ತಕ್ಷಣ, ವೈದ್ಯರು ಚಿಕಿತ್ಸೆ ಕೊಟ್ಟಿದ್ದಾರೆ. ಬಾಣಂತಿ ಜೀವ ಉಳಿಸಲು ಪ್ರಯತ್ನಿಸಿದ್ದಾರೆ. ಆದರೆ, ಹೃದಯ ಸಂಬಂಧಿ ಸಮಸ್ಯೆಯಿಂದ ಅವರು ಮೃತಪಟ್ಟಿದ್ದಾರೆ' ಎಂದು ಬಿಮ್ಸ್ ನಿರ್ದೇಶಕ ಡಾ.ಅಶೋಕಕುಮಾರ ಶೆಟ್ಟಿ ಹೇಳಿದರು.</p><p>'ರೋಗಿಗಳ ಕುಟುಂಬದವರು ಮಾಡಿದ ಆರೋಪದ ಕುರಿತಾಗಿ ತನಿಖೆಗೆ ಆದೇಶಿಸಿದ್ದೇನೆ. ವೈದ್ಯರು ತಪ್ಪು ಎಸಗಿರುವುದು ಸಾಬೀತಾದರೆ, ಶಿಸ್ತು ಕ್ರಮ ಜರುಗಿಸಲಾಗುವುದು' ಎಂದರು.</p><p>ಎಪಿಎಂಸಿ ಠಾಣೆ ಪೊಲೀಸರು ಆಸ್ಪತ್ರೆಗೆ ಆಗಮಿಸಿ ಪರಿಶೀಲಿಸಿದರು. ಎರಡು ದಿನಗಳ ಹಿಂದಷ್ಟೇ ವೈಶಾಲಿ ಸಂಭ್ರಮದಿಂದ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಈಗ ಸಾವನ್ನಪ್ಪಿದ್ದರಿಂದ ಅವರ ಕುಟುಂಬದಲ್ಲಿ ನೀರವ ಮೌನ ಆವರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>