<p><strong>ಅಥಣಿ:</strong> ‘ತಂದೆ–ತಾಯಿಯ ಮೇಲೆ ಸಾಕಷ್ಟು ಜವಾಬ್ದಾರಿ ಇದೆ. ಮಕ್ಕಳಿಗೆ ಪರಿಶ್ರಮದ ಬಗ್ಗೆ ಕಲಿಸಿದರೆ ಸಾಕು. ಅವರಿಗೆ ಒಂದು ಒಳ್ಳೆಯ ಪಲಿತಾಂಶ ಸಿಕ್ಕೇ ಸಿಗುತ್ತದೆ’ ಎಂದು ಶೇಗುಣಸಿ ವಿರಕ್ತಮಠದ ಮಹಾಂತ ದೇವರು ಹೇಳಿದರು.</p>.<p>ಇಲ್ಲಿನ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲೆಯ ಪಾಲಕರಿಗೆ ‘ಆದರ್ಶ ಅಪ್ಪ ಅಮ್ಮ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಎಲ್ಲರೂ ಪಲಿತಾಂಶದ ಮೇಲೆ ದೃಷ್ಟಿ ಇಡುತ್ತಾರೆಯೇ ಹೊರತು ಪರಿಶ್ರಮದ ಮೆಲೆ ದೃಷ್ಟಿ ಇಡುವುದಿಲ್ಲ. ಸಾಧಕರೆಲ್ಲರೂ ಚಿಕ್ಕಂದಿನಿಂದಲೂ ಕಠಿಣ ಪರಿಶ್ರಮಪಟ್ಟಿರುತ್ತಾರೆ. ಇದನ್ನು ಮಕ್ಕಳಿಗೆ ತಿಳಿಸಬೇಕು. ಆನಂದವಾಗಿರುವುದನ್ನು ಅವರಿಗೆ ಕಲಿಸಬೇಕು’ ಎಂದು ಸಲಹೆ ನೀಡಿದರು.</p>.<p>ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ ಮಾತನಾಡಿ, ‘ಶಾಲೆಗಳು ಸಾಮಾನ್ಯವಾಗಿ ಮಕ್ಕಳ ಮೇಲೆ ಮಾತ್ರ ಗಮನ ಕೊಡುತ್ತವೆ. ಆದರೆ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆ ಪಾಲಕರ ಮೇಲೂ ಗಮನ ಕೊಡುತ್ತಿರುವುದು ಅಭಿನಂದನಾರ್ಹ. ಈ ಶಾಲೆಯಿಂದ ಹೊರ ಹೋಗುವವರು ಅಸಾಮಾನ್ಯರಾಗಿರುತ್ತಾರೆ’ ಎಂದರು.</p>.<p>ನಿವೃತ್ತ ಮುಖ್ಯಶಿಕ್ಷಕ ಅಮರೇಶ ಬಿರಾದರ, ‘ಮಕ್ಕಳನ್ನು ಉತ್ತಮವಾಗಿ ರೂಪಿಸುವ ನಿಟ್ಟಿನಲ್ಲಿ ಶಿಕ್ಷಕರೊಂದಿಗೆ ಪಾಲಕರ ಜವಾಬ್ದಾರಿಯೂ ಇದೆ’ ಎಂದು ತಿಳಿಸಿದರು.</p>.<p>ರೋಟರಿ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಸಿದ್ಧಾರೂಢ ಸವದಿ, ಚಿಕ್ಕಟ್ಟಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುರೇಶ ಚಿಕ್ಕಟ್ಟಿ ಮಾತನಾಡಿದರು.</p>.<p>10ನೇ ತರಗತಿ ವಿದ್ಯಾರ್ಥಿ ಶ್ರೇಯಾ ದಾನಪ್ಪನ್ನವರ ಬರೆದ ‘ಮನದಾಳ ತಿಳಿದಾಗ’ ಪುಸ್ತಕ ಬಿಡುಗಡೆ ಮಾಡಲಾಯಿತು.</p>.<p>ಈ ವೇಳೆ ನೌಕರರ ಸಂಘದ ಅಧ್ಯಕ್ಷ ರಾಮಣ್ಣ ದರಿಗೌಡ, ಸಂಸ್ಥೆ ಕಾರ್ಯದರ್ಶಿ ಸದಾಶಿವ ಚಿಕ್ಕಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ:</strong> ‘ತಂದೆ–ತಾಯಿಯ ಮೇಲೆ ಸಾಕಷ್ಟು ಜವಾಬ್ದಾರಿ ಇದೆ. ಮಕ್ಕಳಿಗೆ ಪರಿಶ್ರಮದ ಬಗ್ಗೆ ಕಲಿಸಿದರೆ ಸಾಕು. ಅವರಿಗೆ ಒಂದು ಒಳ್ಳೆಯ ಪಲಿತಾಂಶ ಸಿಕ್ಕೇ ಸಿಗುತ್ತದೆ’ ಎಂದು ಶೇಗುಣಸಿ ವಿರಕ್ತಮಠದ ಮಹಾಂತ ದೇವರು ಹೇಳಿದರು.</p>.<p>ಇಲ್ಲಿನ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲೆಯ ಪಾಲಕರಿಗೆ ‘ಆದರ್ಶ ಅಪ್ಪ ಅಮ್ಮ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಎಲ್ಲರೂ ಪಲಿತಾಂಶದ ಮೇಲೆ ದೃಷ್ಟಿ ಇಡುತ್ತಾರೆಯೇ ಹೊರತು ಪರಿಶ್ರಮದ ಮೆಲೆ ದೃಷ್ಟಿ ಇಡುವುದಿಲ್ಲ. ಸಾಧಕರೆಲ್ಲರೂ ಚಿಕ್ಕಂದಿನಿಂದಲೂ ಕಠಿಣ ಪರಿಶ್ರಮಪಟ್ಟಿರುತ್ತಾರೆ. ಇದನ್ನು ಮಕ್ಕಳಿಗೆ ತಿಳಿಸಬೇಕು. ಆನಂದವಾಗಿರುವುದನ್ನು ಅವರಿಗೆ ಕಲಿಸಬೇಕು’ ಎಂದು ಸಲಹೆ ನೀಡಿದರು.</p>.<p>ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ ಮಾತನಾಡಿ, ‘ಶಾಲೆಗಳು ಸಾಮಾನ್ಯವಾಗಿ ಮಕ್ಕಳ ಮೇಲೆ ಮಾತ್ರ ಗಮನ ಕೊಡುತ್ತವೆ. ಆದರೆ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆ ಪಾಲಕರ ಮೇಲೂ ಗಮನ ಕೊಡುತ್ತಿರುವುದು ಅಭಿನಂದನಾರ್ಹ. ಈ ಶಾಲೆಯಿಂದ ಹೊರ ಹೋಗುವವರು ಅಸಾಮಾನ್ಯರಾಗಿರುತ್ತಾರೆ’ ಎಂದರು.</p>.<p>ನಿವೃತ್ತ ಮುಖ್ಯಶಿಕ್ಷಕ ಅಮರೇಶ ಬಿರಾದರ, ‘ಮಕ್ಕಳನ್ನು ಉತ್ತಮವಾಗಿ ರೂಪಿಸುವ ನಿಟ್ಟಿನಲ್ಲಿ ಶಿಕ್ಷಕರೊಂದಿಗೆ ಪಾಲಕರ ಜವಾಬ್ದಾರಿಯೂ ಇದೆ’ ಎಂದು ತಿಳಿಸಿದರು.</p>.<p>ರೋಟರಿ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಸಿದ್ಧಾರೂಢ ಸವದಿ, ಚಿಕ್ಕಟ್ಟಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುರೇಶ ಚಿಕ್ಕಟ್ಟಿ ಮಾತನಾಡಿದರು.</p>.<p>10ನೇ ತರಗತಿ ವಿದ್ಯಾರ್ಥಿ ಶ್ರೇಯಾ ದಾನಪ್ಪನ್ನವರ ಬರೆದ ‘ಮನದಾಳ ತಿಳಿದಾಗ’ ಪುಸ್ತಕ ಬಿಡುಗಡೆ ಮಾಡಲಾಯಿತು.</p>.<p>ಈ ವೇಳೆ ನೌಕರರ ಸಂಘದ ಅಧ್ಯಕ್ಷ ರಾಮಣ್ಣ ದರಿಗೌಡ, ಸಂಸ್ಥೆ ಕಾರ್ಯದರ್ಶಿ ಸದಾಶಿವ ಚಿಕ್ಕಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>