<p>ಬೆಳಗಾವಿ: ‘ಖಾನಾಪುರದ ಯುವಕ ಅರ್ಬಾಜ್ ಮುಲ್ಲಾ ಕೊಲೆ ಮಾಡಿದವರಿಗೆ ಕಠಿಣ ಶಿಕ್ಷ ಆಗುವಂತೆ ನೋಡಿಕೊಳ್ಳಬೇಕು’ ಎಂದು ಮುಸ್ಲಿಂ ಧಾರ್ಮಿಕ ಮುಖಂಡರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದರು.</p>.<p>ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಮೌಲಾನಾ ಸಲೀಂ ಮತ್ತು ಮುಫ್ತಿ ಮಂಜೂರ್ ಆಲಂ, ‘ಪ್ರಸ್ತುತ ದೇಶದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಲಾಗುತ್ತಿದೆ. ಇಂತಹ ಘಟನೆಗಳ ಮೂಲಕ ಸಮಾಜದ ಆರೋಗ್ಯವನ್ನು ಕೆಡಿಸಲು ಯತ್ನಿಸಲಾಗುತ್ತಿದೆ. ಅಂಥವರಿಗೆ ಗಲ್ಲು ಶಿಕ್ಷೆ ಆಗಬೇಕು’ ಎಂದು ಆಗ್ರಹಿಸಿದರು.</p>.<p>ಮೊಹಮ್ಮದ್ ರಫೀಕ್ ಸಯ್ಯದ್, ‘ತಪ್ಪಿತಸ್ಥರ ವಿರುದ್ಧ ಸಂಘಟಿತ ಅಪರಾಧ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ಗಲ್ಲು ಶಿಕ್ಷೆ ವಿಧಿಸಬೇಕು’ ಎಂದು ಕೋರಿದರು.</p>.<p>ನಗರಪಾಲಿಕೆ ಸದಸ್ಯ ಅಜೀಮ್ ಪಠವೇಗಾರ ಮಾತನಾಡಿ, ‘ಈ ಅಮಾನವೀಯ ಕೃತ್ಯ ಮಾಡಿದವರ ಹಾಗೂ ಅದಕ್ಕೆ ಪಿತೂರಿ ಮಾಡಿದವರ ಮೇಲೂ ಪೊಲೀಸರು ಕಠಿಣ ಕಾನೂನುಗಳನ್ನು ವಿಧಿಸಿ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಖಾನಾಪುರದ ಯುವಕ ಅರ್ಬಾಜ್ ಮುಲ್ಲಾ ಕೊಲೆ ಮಾಡಿದವರಿಗೆ ಕಠಿಣ ಶಿಕ್ಷ ಆಗುವಂತೆ ನೋಡಿಕೊಳ್ಳಬೇಕು’ ಎಂದು ಮುಸ್ಲಿಂ ಧಾರ್ಮಿಕ ಮುಖಂಡರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದರು.</p>.<p>ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಮೌಲಾನಾ ಸಲೀಂ ಮತ್ತು ಮುಫ್ತಿ ಮಂಜೂರ್ ಆಲಂ, ‘ಪ್ರಸ್ತುತ ದೇಶದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಲಾಗುತ್ತಿದೆ. ಇಂತಹ ಘಟನೆಗಳ ಮೂಲಕ ಸಮಾಜದ ಆರೋಗ್ಯವನ್ನು ಕೆಡಿಸಲು ಯತ್ನಿಸಲಾಗುತ್ತಿದೆ. ಅಂಥವರಿಗೆ ಗಲ್ಲು ಶಿಕ್ಷೆ ಆಗಬೇಕು’ ಎಂದು ಆಗ್ರಹಿಸಿದರು.</p>.<p>ಮೊಹಮ್ಮದ್ ರಫೀಕ್ ಸಯ್ಯದ್, ‘ತಪ್ಪಿತಸ್ಥರ ವಿರುದ್ಧ ಸಂಘಟಿತ ಅಪರಾಧ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ಗಲ್ಲು ಶಿಕ್ಷೆ ವಿಧಿಸಬೇಕು’ ಎಂದು ಕೋರಿದರು.</p>.<p>ನಗರಪಾಲಿಕೆ ಸದಸ್ಯ ಅಜೀಮ್ ಪಠವೇಗಾರ ಮಾತನಾಡಿ, ‘ಈ ಅಮಾನವೀಯ ಕೃತ್ಯ ಮಾಡಿದವರ ಹಾಗೂ ಅದಕ್ಕೆ ಪಿತೂರಿ ಮಾಡಿದವರ ಮೇಲೂ ಪೊಲೀಸರು ಕಠಿಣ ಕಾನೂನುಗಳನ್ನು ವಿಧಿಸಿ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>