‘ಅಡಿಕೆ ಸಾಗಣೆಯಲ್ಲಿ ತೆರಿಗೆ ವಂಚಿಸುವವರ ಮೇಲೆ ನಿಗಾ ವಹಿಸಲಾಗಿದೆ. ಸರ್ಕಾರಕ್ಕೆ ಆಗುವ ನಷ್ಟ ತಪ್ಪಿಸುವ ನಿಟ್ಟಿನಲ್ಲಿ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಶಿವಮೊಗ್ಗ ಸಮೀಪದಲ್ಲಿ ಖರೀದಿಸಿದ ಅಡಿಕೆಯನ್ನು ದೆಹಲಿ ಹಾಗೂ ಅಹಮದಾಬಾದ್ಗೆ ಸಾಗಿಸಲಾಗುತ್ತಿತ್ತು ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆ ವಾಹನಗಳು ಮತ್ತು ಸರಕನ್ನು ಡಿಜಿಜಿಐ ಅಧಿಕಾರಿಗಳ ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದು ಜಿಎಸ್ಟಿ ಬೆಳಗಾವಿ ಕಚೇರಿಯ ಸಹಾಯಕ ಆಯುಕ್ತ ಅಜಿಂಕ್ಯ ಹರಿ ಕಾಟ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.