‘ಗಣಪತಿ, ಕಾಲಭೈರವ ದೇವಸ್ಥಾನಕ್ಕೆ ಸೇರಿದ ಜಮೀನದು ಎಂದು ಪಂಚರು ಹೇಳುತ್ತಿದ್ದಾರೆ. ವಿವಾದ ನ್ಯಾಯಾಲಯದಲ್ಲಿದೆ. ನ್ಯಾಯಾಲಯ ನೀಡುವ ತೀರ್ಪಿನಂತೆ ಆಗಲಿ. ಹೀಗಿರುವಾಗ, ನಮಗೆ ಬಹಿಷ್ಕಾರ ಹಾಕುವುದು ಎಷ್ಟು ಸರಿ? ನಮ್ಮ ಜಮೀನಿನ ಕೆಲಸಕ್ಕೆ ಯಾರೂ ಬಾರದಂತೆ ಮಾಡಿದ್ದಾರೆ. ಅಂಗಡಿಗೆ, ದೇವಸ್ಥಾನಕ್ಕೆ ನಿರ್ಬಂಧಿಸಿದ್ದಾರೆ. ತರಕಾರಿ ಖರೀದಿಗೂ ತೊಂದರೆ ಕೊಡುತ್ತಿದ್ದಾರೆ. ಮಕ್ಕಳೊಂದಿಗೂ ಮಾತನಾಡುತ್ತಿಲ್ಲ. ನಮ್ಮೊಂದಿಗೆ ಯಾರಾದರೂ ಮಾತನಾಡಿದರೆ ₹ 1ಸಾವಿರ ದಂಡ ವಿಧಿಸುವುದಾಗಿ ತಿಳಿಸಿದ್ದಾರೆ’ ಎಂದು ಆರೋಪಿಸಿದರು.