ಗುತ್ತಿಗೆದಾರ ಸಂತೋಷ್ ಪಾಟೀಲ ಸಾವಿನ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ತನಿಖೆ ನಡೆಸುತ್ತಿದ್ದಾರೆ. ಹಲವು ಅಯಾಮಗಳಿವೆ. ಘಟನೆಯ ಹಿಂದೆ ಯಾರಾರಿದ್ದಾರೆ ಎನ್ನುವುದನ್ನು ತನಿಖೆ ನಡೆಸಬೇಕಾಗುತ್ತದೆ. ಇದನ್ನು ಸಣ್ಣ ಘಟನೆ ಎಂದು ಪರಿಗಣಿಸಬಾರದು. ಇದು ಗಂಭೀರವಾದ ವಿಷಯವಾಗಿದೆ. ಶೀಘ್ರದಲ್ಲೇ ಒಂದು ನಿರ್ಣಯಕ್ಕೆ ಬರಲಾಗುವುದು ಎಂದರು.