ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ಸವದ ದಿನ ಅಸಮಾಧಾನದ ಮಾತೇಕೆ?: ಅರುಣ್ ಸಿಂಗ್

Last Updated 17 ಜನವರಿ 2021, 5:45 IST
ಅಕ್ಷರ ಗಾತ್ರ

ಬೆಳಗಾವಿ: ಉತ್ಸವದ ದಿನ ಅಸಮಾಧಾನದ ಮಾತೇಕೆ? – ಹೀಗೆ ಕೇಳಿದವರು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್.

ಇಲ್ಲಿ ಬಿಜೆಪಿಯಿಂದ ಆಯೋಜಿಸಿರುವ ಜನಸೇವಕ ಸಮಾವೇಶ ಸಮಾರೋಪದಲ್ಲಿ ಪಾಲ್ಗೊಳ್ಳಲು ಸಾಂಬ್ರಾ ವಿಮಾನನಿಲ್ದಾಣಕ್ಕೆ ಭಾನುವಾರ ಬಂದ ಅವರು, ಅಸಮಾಧಾನಿತ ಶಾಸಕರು, ಬ್ಲ್ಯಾಕ್‌ಮೇಲ್ ರಾಜಕಾರಣ, ಸಿ.ಡಿ. ವಿಚಾರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

‘ಇಂದು ದೊಡ್ಡ ಮಟ್ಟದ ಉತ್ಸವದ ದಿನವಾಗಿದೆ. ಆ ಬಗ್ಗೆ ಈಗೇಕೆ ಮಾತನಾಡುವುದು. ಬಹಳ ದಿನಗಳ ಬಳಿಕ ಇಲ್ಲಿ ಪಕ್ಷದಿಂದ ಬೃಹತ್ ಸಮಾವೇಶ ನಡೆಯುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ನಾವೆಲ್ಲರೂ ಅವರನ್ನು ಅಭಿನಂದಿಸುತ್ತಿದ್ದೇವೆ’ ಎಂದರು.

‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಇಂದು ಚರ್ಚೆ ಆಗುವುದಿಲ್ಲ. ಆದರೆ, ಚುನಾವಣೆಯಲ್ಲಿ ನಾವು ಗೆಲ್ಲಲಿದ್ದೇವೆ’ ಎಂದು ವಿಶ್ವಾಸ ವ್ಯಕ್ತ‍ಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT