<p><strong>ಬೆಳಗಾವಿ:</strong> ಪ್ರೋತ್ಸಾಹ ಧನ ಹಾಗೂ ಗೌರವ ಧನ ಎರಡನ್ನೂ ಸೇರಿಸಿ ಪ್ರತಿ ತಿಂಗಳು ₹ 12 ಸಾವಿರ ಗೌರವ ಧನ ನೀಡಬೇಕು ಹಾಗೂ ಕೊರೊನಾ ಹಿನ್ನೆಲೆಯಲ್ಲಿ ಜೀವ ರಕ್ಷಕ ವಸ್ತುಗಳನ್ನು ನೀಡಬೇಕೆಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಒತ್ತಾಯಿಸಿದೆ.</p>.<p>ನಗರದಲ್ಲಿ ಗುರುವಾರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಪ್ರಸ್ತುತ ಕಾರ್ಯಕರ್ತೆಯರಿಗೆ ಮಾಸಿಕ ಗೌರವ ಧನ ₹ 4 ಸಾವಿರ ಹಾಗೂ ಇತರೆ ಕೆಲಸ ಕಾರ್ಯಗಳನ್ನು ಸೇರಿಸಿ ₹ 8 ಸಾವಿರದಿಂದ 9 ಸಾವಿರದವರೆಗೆ ಸಿಗುತ್ತಿದೆ. ಹೀಗೆ, ಬಿಡಿಬಿಡಿಯಾಗಿ ನೀಡುವ ಬದಲು ಒಟ್ಟಾಗಿ ₹ 12 ಸಾವಿರ ನೀಡಬೇಕು. ಇದರ ಬಗ್ಗೆ ಹಲವು ಬಾರಿ ಹೋರಾಟ ಮಾಡಿದ್ದೇವೆ. ಸರ್ಕಾರ ಕೇವಲ ಭರವಸೆ ನೀಡುತ್ತ ಬಂದಿದೆ, ಹೊರತು ಈಡೇರಿಸಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕೊರೊನಾ ವಿರುದ್ಧ ಮುಂದೆ ನಿಂತು ಆಶಾ ಕಾರ್ಯಕರ್ತೆಯರು ಹೋರಾಟ ಮಾಡುತ್ತಿದ್ದಾರೆ. ಇವರಿಗೆ ಸುರಕ್ಷಾ ಕಿಟ್ಗಳನ್ನು ನೀಡಬೇಕು. ಮಾಸ್ಕ್ ಸ್ಯಾನಿಟೈಸರ್, ಕೈಗವುಸು ನೀಡಬೇಕು. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಜುಲೈ 10ರಿಂದ ಸೇವೆ ಸ್ಥಗಿತಗೊಳಿಸಿ, ಪ್ರತಿಭಟನೆ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಪ್ರೋತ್ಸಾಹ ಧನ ಹಾಗೂ ಗೌರವ ಧನ ಎರಡನ್ನೂ ಸೇರಿಸಿ ಪ್ರತಿ ತಿಂಗಳು ₹ 12 ಸಾವಿರ ಗೌರವ ಧನ ನೀಡಬೇಕು ಹಾಗೂ ಕೊರೊನಾ ಹಿನ್ನೆಲೆಯಲ್ಲಿ ಜೀವ ರಕ್ಷಕ ವಸ್ತುಗಳನ್ನು ನೀಡಬೇಕೆಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಒತ್ತಾಯಿಸಿದೆ.</p>.<p>ನಗರದಲ್ಲಿ ಗುರುವಾರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಪ್ರಸ್ತುತ ಕಾರ್ಯಕರ್ತೆಯರಿಗೆ ಮಾಸಿಕ ಗೌರವ ಧನ ₹ 4 ಸಾವಿರ ಹಾಗೂ ಇತರೆ ಕೆಲಸ ಕಾರ್ಯಗಳನ್ನು ಸೇರಿಸಿ ₹ 8 ಸಾವಿರದಿಂದ 9 ಸಾವಿರದವರೆಗೆ ಸಿಗುತ್ತಿದೆ. ಹೀಗೆ, ಬಿಡಿಬಿಡಿಯಾಗಿ ನೀಡುವ ಬದಲು ಒಟ್ಟಾಗಿ ₹ 12 ಸಾವಿರ ನೀಡಬೇಕು. ಇದರ ಬಗ್ಗೆ ಹಲವು ಬಾರಿ ಹೋರಾಟ ಮಾಡಿದ್ದೇವೆ. ಸರ್ಕಾರ ಕೇವಲ ಭರವಸೆ ನೀಡುತ್ತ ಬಂದಿದೆ, ಹೊರತು ಈಡೇರಿಸಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕೊರೊನಾ ವಿರುದ್ಧ ಮುಂದೆ ನಿಂತು ಆಶಾ ಕಾರ್ಯಕರ್ತೆಯರು ಹೋರಾಟ ಮಾಡುತ್ತಿದ್ದಾರೆ. ಇವರಿಗೆ ಸುರಕ್ಷಾ ಕಿಟ್ಗಳನ್ನು ನೀಡಬೇಕು. ಮಾಸ್ಕ್ ಸ್ಯಾನಿಟೈಸರ್, ಕೈಗವುಸು ನೀಡಬೇಕು. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಜುಲೈ 10ರಿಂದ ಸೇವೆ ಸ್ಥಗಿತಗೊಳಿಸಿ, ಪ್ರತಿಭಟನೆ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>