<p><strong>ಬೆಳಗಾವಿ</strong>: ‘ಉತ್ತರ ಕರ್ನಾಟಕದ ಶಾಸಕರು ಅಭಿವೃದ್ಧಿಗೆ ಶ್ರಮಿಸಲಿ. ಆ ಮೇಲೆ ಪ್ರತ್ಯೇಕ ರಾಜ್ಯದ ವಿಷಯ ಮಾತನಾಡಲಿ. ಸುಮ್ಮನೆ ಪ್ರಚಾರ, ರಾಜಕೀಯ ಕಾರಣಕ್ಕೆ ರಾಜ್ಯ ವಿಭಜನೆ ಬಗ್ಗೆ ಸಿ.ಎಂಗೆ ಪತ್ರ ಬರೆಯಬೇಡಿ’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಕಿಡಿಕಾರಿದ್ದಾರೆ.</p>.<p>ಕಾಗವಾಡ ಶಾಸಕ ಭರಮಗೌಡ ಕಾಗೆ ಅವರು ಮುಖ್ಯಮಂತ್ರಿಗೆ ಬರೆದ ಪತ್ರವನ್ನು ಖಂಡಿಸಿದ್ದಾರೆ.</p>.<p>‘ಉತ್ತರ ಕರ್ನಾಟಕ ಭಾಗದ 14 ಜಿಲ್ಲೆಗಳ 96 ಶಾಸಕರು ಇದ್ದಾರೆ. ಯಾರೂ ಏಕೆ ಅಭಿವೃದ್ಧಿಯಲ್ಲಿ ಮುಂದೆ ಇಲ್ಲ? ಮೊದಲು ತಮ್ಮ ಕೆಲಸ ಸರಿಯಾಗಿ ಮಾಡಿದ್ದರೆ ಇಂಥ ಸ್ಥಿತಿ ಬರುತ್ತಿರಲಿಲ್ಲ’ ಎಂದು ಹೇಳಿದ್ದಾರೆ.</p>.<p>‘ಭರಮಗೌಡ ಕಾಗೆ ಅವರು ಮೊದಲು 10 ಶಾಸಕರನ್ನು ಸೇರಿಸಿ ಇದೇ ವಿಷಯದ ಮೇಲೆ ಚುನಾವಣೆಗೆ ಸ್ಪರ್ಧಿಸಿ, ಸಾಮರ್ಥ್ಯ ಸಾಬೀತು ಮಾಡಲಿ’ ಎಂದು ಸವಾಲು ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಉತ್ತರ ಕರ್ನಾಟಕದ ಶಾಸಕರು ಅಭಿವೃದ್ಧಿಗೆ ಶ್ರಮಿಸಲಿ. ಆ ಮೇಲೆ ಪ್ರತ್ಯೇಕ ರಾಜ್ಯದ ವಿಷಯ ಮಾತನಾಡಲಿ. ಸುಮ್ಮನೆ ಪ್ರಚಾರ, ರಾಜಕೀಯ ಕಾರಣಕ್ಕೆ ರಾಜ್ಯ ವಿಭಜನೆ ಬಗ್ಗೆ ಸಿ.ಎಂಗೆ ಪತ್ರ ಬರೆಯಬೇಡಿ’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಕಿಡಿಕಾರಿದ್ದಾರೆ.</p>.<p>ಕಾಗವಾಡ ಶಾಸಕ ಭರಮಗೌಡ ಕಾಗೆ ಅವರು ಮುಖ್ಯಮಂತ್ರಿಗೆ ಬರೆದ ಪತ್ರವನ್ನು ಖಂಡಿಸಿದ್ದಾರೆ.</p>.<p>‘ಉತ್ತರ ಕರ್ನಾಟಕ ಭಾಗದ 14 ಜಿಲ್ಲೆಗಳ 96 ಶಾಸಕರು ಇದ್ದಾರೆ. ಯಾರೂ ಏಕೆ ಅಭಿವೃದ್ಧಿಯಲ್ಲಿ ಮುಂದೆ ಇಲ್ಲ? ಮೊದಲು ತಮ್ಮ ಕೆಲಸ ಸರಿಯಾಗಿ ಮಾಡಿದ್ದರೆ ಇಂಥ ಸ್ಥಿತಿ ಬರುತ್ತಿರಲಿಲ್ಲ’ ಎಂದು ಹೇಳಿದ್ದಾರೆ.</p>.<p>‘ಭರಮಗೌಡ ಕಾಗೆ ಅವರು ಮೊದಲು 10 ಶಾಸಕರನ್ನು ಸೇರಿಸಿ ಇದೇ ವಿಷಯದ ಮೇಲೆ ಚುನಾವಣೆಗೆ ಸ್ಪರ್ಧಿಸಿ, ಸಾಮರ್ಥ್ಯ ಸಾಬೀತು ಮಾಡಲಿ’ ಎಂದು ಸವಾಲು ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>