<p><strong>ರಾಮದುರ್ಗ:</strong> ಸರ್ಕಾರ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ನೀಡುವ ಅನುದಾನದ ಪ್ರಯೋಜನ ಪಡೆದು ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಲು ಗ್ರಾಮೀಣ ಮಕ್ಕಳು ಮುಂದಾಗಬೇಕು ಎಂದು ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.</p>.<p>ಶುಕ್ರವಾರ ತಾಲ್ಲೂಕಿನ ಜಾಲಿಕಟ್ಟಿ ಗ್ರಾಮದಲ್ಲಿ ನಬಾರ್ಡ ಆರ್ಐಡಿಎಫ್ ಯೋಜನೆಯಡಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿ ಉದ್ಘಾಟಿಸಿ ಮಾತನಾಡಿ, ಉತ್ತಮ ಪ್ರಜೆಗಳ ನಿರ್ಮಾಣ ಮತ್ತು ಮನುಷ್ಯನ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಅಗತ್ಯ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮವ್ವ ಬಡಕಲಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಆರ್. ಕಾಂಬಳೆ ಪ್ರಾಸ್ತಾವಿಕವಾಗಿ <br>ಮಾತನಾಡಿದರು.</p>.<p>ಎಸ್ಡಿಎಂಸಿ ಅಧ್ಯಕ್ಷ ಭರಮಪ್ಪ ಬೆಳಗಂಟಿ, ಪಂಚಾಯಿತಿ ಉಪಾಧ್ಯಕ್ಷ ಯಲ್ಲಪ್ಪ ಬೆಳಗಂಟಿ, ಸದಸ್ಯೆ ನಾಗವ್ವ ಕಂಬಳಿ, ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಜಿ. ಬಿ. ರಂಗನಗೌಡ್ರ, ಅವ್ವಪ್ಪ ಅಂಗಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ:</strong> ಸರ್ಕಾರ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ನೀಡುವ ಅನುದಾನದ ಪ್ರಯೋಜನ ಪಡೆದು ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಲು ಗ್ರಾಮೀಣ ಮಕ್ಕಳು ಮುಂದಾಗಬೇಕು ಎಂದು ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.</p>.<p>ಶುಕ್ರವಾರ ತಾಲ್ಲೂಕಿನ ಜಾಲಿಕಟ್ಟಿ ಗ್ರಾಮದಲ್ಲಿ ನಬಾರ್ಡ ಆರ್ಐಡಿಎಫ್ ಯೋಜನೆಯಡಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿ ಉದ್ಘಾಟಿಸಿ ಮಾತನಾಡಿ, ಉತ್ತಮ ಪ್ರಜೆಗಳ ನಿರ್ಮಾಣ ಮತ್ತು ಮನುಷ್ಯನ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಅಗತ್ಯ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮವ್ವ ಬಡಕಲಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಆರ್. ಕಾಂಬಳೆ ಪ್ರಾಸ್ತಾವಿಕವಾಗಿ <br>ಮಾತನಾಡಿದರು.</p>.<p>ಎಸ್ಡಿಎಂಸಿ ಅಧ್ಯಕ್ಷ ಭರಮಪ್ಪ ಬೆಳಗಂಟಿ, ಪಂಚಾಯಿತಿ ಉಪಾಧ್ಯಕ್ಷ ಯಲ್ಲಪ್ಪ ಬೆಳಗಂಟಿ, ಸದಸ್ಯೆ ನಾಗವ್ವ ಕಂಬಳಿ, ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಜಿ. ಬಿ. ರಂಗನಗೌಡ್ರ, ಅವ್ವಪ್ಪ ಅಂಗಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>