ಗ್ರಾಮದಲ್ಲಿ ತಮ್ಮ ಬೆಂಬಲಿಗರನ್ನು ಶನಿವಾರ ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನನ್ನನ್ನು ಪಕ್ಷಕ್ಕೆ ಆಹ್ವಾನಿಸಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಖುದ್ದಾಗಿ ಭೇಟಿ ನೀಡಿ ಆಹ್ವಾನಿಸಿದ್ದರು. ಆಗ ನಾನು ಕಾಲಾವಕಾಶ ಕೋರಿದ್ದೆ’ ಎಂದರು.