ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸವದತ್ತಿ | ರಸ್ತೆ ಅಪಘಾತದಲ್ಲಿ ಎಎಸ್‌ಐ ಸಾವು

Last Updated 10 ಮೇ 2020, 12:54 IST
ಅಕ್ಷರ ಗಾತ್ರ

ಸವದತ್ತಿ: ಪಟ್ಟಣದ ಹೊರವಲಯದ ನಿಕ್ಕಂ ಕಲ್ಯಾಣ ಮಂಟಪ ಬಳಿ ಶನಿವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ದ್ವಿಚಕ್ರವಾಹನದಲ್ಲಿ ಸವದತ್ತಿ ಠಾಣೆಯ ಎಎಸ್‌ಐ ಯಲ್ಲ‍ಪ್ಪ ಆರ್. ತಳವಾರ (59) ಮೃತರಾದರು.

ಕರ್ತವ್ಯ ಮುಗಿಸಿ ಸ್ವಗ್ರಾಮ ಬೈಲಹೊಂಗಲದ ಅನಿಗೋಳಕ್ಕೆ ತೆರಳುವಾಗ ಅಪಘಾತ ನಡೆದಿದೆ. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರು ಇನ್ನೆರಡು ತಿಂಗಳಲ್ಲಿ ನಿವೃತ್ತಿ ಆಗುವವರಿದ್ದರು.

ಸವದತ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಮೃತರ ಕುಟುಂಬಕ್ಕೆ ಭಾನುವಾರ ಸಾಂತ್ವಾನ ಹೇಳಿದರು. ಸರ್ಕಾರದಿಂದ ಬರಬೇಕಾದ ಎಲ್ಲ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT