‘ಬಳಿಕ ಅವರನ್ನು ಅಮನ್ನಗರದ ಹೊಲವೊಂದಕ್ಕೆ ಕರೆದೊಯ್ದಿದ್ದಾರೆ. ಆ ವೇಳೆಗಾಗಲೇ ದ್ವಿಚಕ್ರವಾಹನದಲ್ಲಿ ಬಂದಿದ್ದ 10ರಿಂದ 15 ಮಂದಿಯೂ ಸೇರಿಕೊಂಡು ಕಬ್ಬಿಣದ ರಾಡ್ ಹಾಗೂ ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ರಕ್ತಹೆಪ್ಪುಗಟ್ಟುವಂತೆ ಗಾಯಗಳಾಗಿವೆ. ಅವರು ನಮ್ಮನ್ನು ಕೊಲ್ಲಲು ಯತ್ನಿಸಿದ್ದಲ್ಲದೇ, ಯುವಕನ ಬಳಿ ಇದ್ದ ಅಂದಾಜು ₹ 20ಸಾವಿರ ಮೌಲ್ಯದ ಮೊಬೈಲ್ ಫೋನ್, ₹ 50ಸಾವಿರ, ಆಧಾರ್ ಕಾರ್ಡ್ ಮತ್ತು ಎಟಿಎಂ ಕಾರ್ಡ್ ಕಸಿದುಕೊಂಡಿದ್ದಾರೆ’ ಎಂದು ದೂರು ನೀಡಲಾಗಿದೆ.