<p>ಅಥಣಿ: ‘ಮುಂದಿನ ವರ್ಷದ ಒಳಗಾಗಿ ನೀರು ಒದಗಿಸುವ ಕಾರ್ಯ ಮಾಡಲಾಗುವುದು, 17100ಎಚ್ಪಿ ಸಾಮರ್ಥ್ಯದ ಮೂರು ಮೋಟಾರ್ ಕೂಡಿಸಿ 14 ತಿಂಗಳಿನಲ್ಲಿ ಏಳು ಗ್ರಾಮಗಳಿಗೆ ನೀರು ಪೂರೈಸಲಾಗುವುದು, ಕೃಷ್ಣಾ ನದಿಯ ಪ್ರವಾಹ ಮಹಾಪೂರ ಬಂದರೂ ತೊಂದರೆಯಾಗದಂತಹ ಉನ್ನತ ತಂತ್ರಜ್ಞಾನದ ವ್ಯವಸ್ಥೆಯನ್ನು ಅಳವಡಿಸಿಕೊಂಡು, ರಾಜ್ಯದಲ್ಲೆ ಮಾದರಿ ಯೋಜನೆಯನ್ನಾಗಿಸಲಾಗಿದೆ’ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.</p>.<p>ತಾಲ್ಲೂಕಿನ ಅರಟಾಳ ಕ್ರಾಸ್ ಹತ್ತಿರ ಜರುಗಿದ ಅಮ್ಮಾಜೇಶ್ವರಿ -ಕೊಟ್ಟಲಗಿ ಏತನೀರಾವರಿ ಯೋಜನೆಯ ಎಂ.ಎಸ್ ಪೈಪ್ಗಳ ಜೋಡಣೆಯ ಪೂಜಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ತುಬಚಿ ಬಬಲೇಶ್ವರಿ ಏತ ನೀರಾವರಿ ಮಂಜೂರು ಮಾಡುವ ವೇಳೆ ನಮ್ಮ ಭಾಗದ ಏಳು ಹಳ್ಳಿಗಳಿಗೆ ಆಡಳಿತಾತ್ಮಕವಾಗಿ ಮಂಜೂರು ಮಾಡಲಾಗಿತ್ತು. ಸರ್ಕಾರ ಬದಲಾದ ವೇಳೆ ಈ ಹಳ್ಳಿಗಳು ಯೋಜನೆಯಿಂದ ವಂಚಿತವಾಗಿದ್ದವು. ಇದೀಗ ಎಲ್ಲ ಹಳ್ಳಿಗಳಿಗೆ ಸುವರ್ಣಕಾಲ ಬಂದಿದೆ’ ಎಂದರು.</p>.<p>ಎಸ್.ಕೆ.ಬುಟಾಳಿ, ಶೇಖರ ನೇಮಗೌಡ, ಶಿವಾನಂದ ಗುಡ್ಡಾಪೂರ ಮಾತನಾಡಿದರು.</p>.<p>ಸಿದರಾಯ ಯಲಡಗಿ, ಶಾಂತಿನಾಥ ನಂದೇಶ್ವರ, ಚಂದ್ರಕಾಂತ ಇಮ್ಮಡಿ, ಗುರಪ್ಪ ದಾಶ್ಯಾಳ, ಶ್ಯಾಮ ಪೂಜಾರಿ, ಶಿವಾನಂದ ಗುಡ್ಡಾಪೂರ, ಅಮೋಘ ಕೊಬ್ರಿ, ಪ್ರವೀಣ ಹುಣಸಿಕಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಥಣಿ: ‘ಮುಂದಿನ ವರ್ಷದ ಒಳಗಾಗಿ ನೀರು ಒದಗಿಸುವ ಕಾರ್ಯ ಮಾಡಲಾಗುವುದು, 17100ಎಚ್ಪಿ ಸಾಮರ್ಥ್ಯದ ಮೂರು ಮೋಟಾರ್ ಕೂಡಿಸಿ 14 ತಿಂಗಳಿನಲ್ಲಿ ಏಳು ಗ್ರಾಮಗಳಿಗೆ ನೀರು ಪೂರೈಸಲಾಗುವುದು, ಕೃಷ್ಣಾ ನದಿಯ ಪ್ರವಾಹ ಮಹಾಪೂರ ಬಂದರೂ ತೊಂದರೆಯಾಗದಂತಹ ಉನ್ನತ ತಂತ್ರಜ್ಞಾನದ ವ್ಯವಸ್ಥೆಯನ್ನು ಅಳವಡಿಸಿಕೊಂಡು, ರಾಜ್ಯದಲ್ಲೆ ಮಾದರಿ ಯೋಜನೆಯನ್ನಾಗಿಸಲಾಗಿದೆ’ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.</p>.<p>ತಾಲ್ಲೂಕಿನ ಅರಟಾಳ ಕ್ರಾಸ್ ಹತ್ತಿರ ಜರುಗಿದ ಅಮ್ಮಾಜೇಶ್ವರಿ -ಕೊಟ್ಟಲಗಿ ಏತನೀರಾವರಿ ಯೋಜನೆಯ ಎಂ.ಎಸ್ ಪೈಪ್ಗಳ ಜೋಡಣೆಯ ಪೂಜಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ತುಬಚಿ ಬಬಲೇಶ್ವರಿ ಏತ ನೀರಾವರಿ ಮಂಜೂರು ಮಾಡುವ ವೇಳೆ ನಮ್ಮ ಭಾಗದ ಏಳು ಹಳ್ಳಿಗಳಿಗೆ ಆಡಳಿತಾತ್ಮಕವಾಗಿ ಮಂಜೂರು ಮಾಡಲಾಗಿತ್ತು. ಸರ್ಕಾರ ಬದಲಾದ ವೇಳೆ ಈ ಹಳ್ಳಿಗಳು ಯೋಜನೆಯಿಂದ ವಂಚಿತವಾಗಿದ್ದವು. ಇದೀಗ ಎಲ್ಲ ಹಳ್ಳಿಗಳಿಗೆ ಸುವರ್ಣಕಾಲ ಬಂದಿದೆ’ ಎಂದರು.</p>.<p>ಎಸ್.ಕೆ.ಬುಟಾಳಿ, ಶೇಖರ ನೇಮಗೌಡ, ಶಿವಾನಂದ ಗುಡ್ಡಾಪೂರ ಮಾತನಾಡಿದರು.</p>.<p>ಸಿದರಾಯ ಯಲಡಗಿ, ಶಾಂತಿನಾಥ ನಂದೇಶ್ವರ, ಚಂದ್ರಕಾಂತ ಇಮ್ಮಡಿ, ಗುರಪ್ಪ ದಾಶ್ಯಾಳ, ಶ್ಯಾಮ ಪೂಜಾರಿ, ಶಿವಾನಂದ ಗುಡ್ಡಾಪೂರ, ಅಮೋಘ ಕೊಬ್ರಿ, ಪ್ರವೀಣ ಹುಣಸಿಕಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>