<p><strong>ಅಥಣಿ:</strong> ‘ಶರಣರ ತತ್ವಗಳ ಅಳವಡಿಕೆಯಿಂದ ಮೂಢನಂಬಿಕೆಗಳನ್ನು ಹೋಗಲಾಡಿಸಬಹುದು. ಗ್ರಹಣವೆಂದರೆ, ಅಶುಭ ಗಳಿಗೆಯಲ್ಲ. ಅದು ನೈಸರ್ಗಿಕ ಪ್ರಕ್ರಿಯೆಯಾಗಿದೆ. ಅದನ್ನು ನಾವು ವೈಚಾರಿಕ ಮನೋಭಾವದಿಂದ ಸ್ವೀಕರಿಸಬೇಕು’ ಎಂದು ಡಾ.ಸಂಜೀವ ಕುಲಕರ್ಣಿ ಹೇಳಿದರು.</p>.<p>ಇಲ್ಲಿನ ಸಂತರಾಮ ಪದವಿ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಗ್ರಹಣ ಪ್ರಸಾದ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.</p>.<p>‘ಗ್ರಹಣದ ಸಂದರ್ಭದಲ್ಲಿ ಕಾಲೇಜಿನ ಮಕ್ಕಳ ಜೊತೆ ಸೇರಿ ಅಡುಗೆ ತಯಾರಿಸಿ ಸೇವಿಸುವುದು, ಈ ಮೂಲಕ ಮೂಢನಂಬಿಕೆ ಹೋಗಲಾಡಿಸುವ ಕಾರ್ಯಕ್ರಮ ಇದಾಗಿದೆ. ಸಮಾಜವನ್ನು ತಿದ್ದುವ ಹಾಗೂ ಮೂಢನಂಬಿಕೆಯ ಭೂತ ಹೊಡೆದೋಡಿಸುವ ಪ್ರಯತ್ನವಾಗಿದೆ. ಗ್ರಹಣದ ವಾಸ್ತವಾಂಶ ತಿಳಿಸಲು ಇಂತಹ ವೈಚಾರಿಕ ಕಾರ್ಯಕ್ರಮಗಳು ಅಲ್ಲಲ್ಲಿ ನಡೆಯಬೇಕು. ಜನರು ಪ್ರಜ್ಞಾವಂತರಾಗಬೇಕು’ ಎಂದು ತಿಳಿಸಿದರು.</p>.<p>ಸಂಪನ್ಮೂಲ ವ್ಯಕ್ತಿ ಸುಧೀಂದ್ರ ಕುಲಕರ್ಣಿ ಮಾತನಾಡಿ, ‘ಅಂಧಶ್ರದ್ಧೆಯ ನಿರ್ಮೂಲನೆ ಆಗಬೇಕಾದರೆ ಎಲ್ಲರೂ ಶಿಕ್ಷಿತರಾಗಬೇಕು. ಕೆಲವು ಶಿಕ್ಷಣವಂತರು ಇನ್ನೂ ಮೌಢ್ಯವನ್ನು ಬಿಟ್ಟಿಲ್ಲ ಎನ್ನುವುದು ವಿಷಾದದ ಸಂಗತಿಯಾಗಿದೆ’ ಎಂದರು.</p>.<p>ಸಂಸ್ಥೆಯ ಕಾರ್ಯಾಧ್ಯಕ್ಷ ಬಿ.ಎಲ್. ಪಾಟೀಲ ಮಾತನಾಡಿ, ‘ಸಮಾಜದಲ್ಲಿರುವ ಮೂಢನಂಬಿಕೆಗಳನ್ನು ಹೋಗಲಾಡಿಸಬೇಕಾದರೆ ಮೊದಲು ನಮ್ಮ ಮನೆಯಲ್ಲಿನ ಮೂಢನಂಬಿಕೆಗಳನ್ನು ತೊಲಗಿಸಬೇಕು. ಮೂಢನಂಬಿಕೆಯನ್ನು ಬಂಡವಾಳವಾಗಿಟ್ಟುಕೊಂಡು ಕೆಲವರು ತಮ್ಮ ಆದಾಯ ಮಾಡಿಕೊಳ್ಳುತ್ತಿದ್ದಾರೆ. ಇದು ಕಳವಳಕಾರಿಯಾಗಿದೆ’ ಎಂದು ಹೇಳಿದರು.</p>.<p>ಶೆಟ್ಟರಮಠದ ಮರುಳಸಿದ್ದ ಸ್ವಾಮೀಜಿ ಮಾತನಾಡಿ, ‘ಅಂಧ ಶ್ರದ್ಧೆಯ ಮೂಲಕ ಯಾರಿಗೂ ತೊಂದರೆ ಕೊಡಬಾರದು’ ಎಂದು ತಿಳಿಸಿದರು.</p>.<p>ಡಾ.ರಮೇಶ ಗುಳ್ಳ, ಶಿವಪುತ್ರ ಯಾದವಾಡ ಮಾತನಾಡಿದರು.</p>.<p>ಭಾರತಿ ಪಾಟೀಲ, ವಿಲಾಸ ಕುಲಕರ್ಣಿ, ಎಂ.ಎನ್. ಅಸ್ಕಿ, ಭಾರತಿ ಬಿಜಾಪೂರೆ, ಎಸ್.ಟಿ. ಚಿಗರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ:</strong> ‘ಶರಣರ ತತ್ವಗಳ ಅಳವಡಿಕೆಯಿಂದ ಮೂಢನಂಬಿಕೆಗಳನ್ನು ಹೋಗಲಾಡಿಸಬಹುದು. ಗ್ರಹಣವೆಂದರೆ, ಅಶುಭ ಗಳಿಗೆಯಲ್ಲ. ಅದು ನೈಸರ್ಗಿಕ ಪ್ರಕ್ರಿಯೆಯಾಗಿದೆ. ಅದನ್ನು ನಾವು ವೈಚಾರಿಕ ಮನೋಭಾವದಿಂದ ಸ್ವೀಕರಿಸಬೇಕು’ ಎಂದು ಡಾ.ಸಂಜೀವ ಕುಲಕರ್ಣಿ ಹೇಳಿದರು.</p>.<p>ಇಲ್ಲಿನ ಸಂತರಾಮ ಪದವಿ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಗ್ರಹಣ ಪ್ರಸಾದ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.</p>.<p>‘ಗ್ರಹಣದ ಸಂದರ್ಭದಲ್ಲಿ ಕಾಲೇಜಿನ ಮಕ್ಕಳ ಜೊತೆ ಸೇರಿ ಅಡುಗೆ ತಯಾರಿಸಿ ಸೇವಿಸುವುದು, ಈ ಮೂಲಕ ಮೂಢನಂಬಿಕೆ ಹೋಗಲಾಡಿಸುವ ಕಾರ್ಯಕ್ರಮ ಇದಾಗಿದೆ. ಸಮಾಜವನ್ನು ತಿದ್ದುವ ಹಾಗೂ ಮೂಢನಂಬಿಕೆಯ ಭೂತ ಹೊಡೆದೋಡಿಸುವ ಪ್ರಯತ್ನವಾಗಿದೆ. ಗ್ರಹಣದ ವಾಸ್ತವಾಂಶ ತಿಳಿಸಲು ಇಂತಹ ವೈಚಾರಿಕ ಕಾರ್ಯಕ್ರಮಗಳು ಅಲ್ಲಲ್ಲಿ ನಡೆಯಬೇಕು. ಜನರು ಪ್ರಜ್ಞಾವಂತರಾಗಬೇಕು’ ಎಂದು ತಿಳಿಸಿದರು.</p>.<p>ಸಂಪನ್ಮೂಲ ವ್ಯಕ್ತಿ ಸುಧೀಂದ್ರ ಕುಲಕರ್ಣಿ ಮಾತನಾಡಿ, ‘ಅಂಧಶ್ರದ್ಧೆಯ ನಿರ್ಮೂಲನೆ ಆಗಬೇಕಾದರೆ ಎಲ್ಲರೂ ಶಿಕ್ಷಿತರಾಗಬೇಕು. ಕೆಲವು ಶಿಕ್ಷಣವಂತರು ಇನ್ನೂ ಮೌಢ್ಯವನ್ನು ಬಿಟ್ಟಿಲ್ಲ ಎನ್ನುವುದು ವಿಷಾದದ ಸಂಗತಿಯಾಗಿದೆ’ ಎಂದರು.</p>.<p>ಸಂಸ್ಥೆಯ ಕಾರ್ಯಾಧ್ಯಕ್ಷ ಬಿ.ಎಲ್. ಪಾಟೀಲ ಮಾತನಾಡಿ, ‘ಸಮಾಜದಲ್ಲಿರುವ ಮೂಢನಂಬಿಕೆಗಳನ್ನು ಹೋಗಲಾಡಿಸಬೇಕಾದರೆ ಮೊದಲು ನಮ್ಮ ಮನೆಯಲ್ಲಿನ ಮೂಢನಂಬಿಕೆಗಳನ್ನು ತೊಲಗಿಸಬೇಕು. ಮೂಢನಂಬಿಕೆಯನ್ನು ಬಂಡವಾಳವಾಗಿಟ್ಟುಕೊಂಡು ಕೆಲವರು ತಮ್ಮ ಆದಾಯ ಮಾಡಿಕೊಳ್ಳುತ್ತಿದ್ದಾರೆ. ಇದು ಕಳವಳಕಾರಿಯಾಗಿದೆ’ ಎಂದು ಹೇಳಿದರು.</p>.<p>ಶೆಟ್ಟರಮಠದ ಮರುಳಸಿದ್ದ ಸ್ವಾಮೀಜಿ ಮಾತನಾಡಿ, ‘ಅಂಧ ಶ್ರದ್ಧೆಯ ಮೂಲಕ ಯಾರಿಗೂ ತೊಂದರೆ ಕೊಡಬಾರದು’ ಎಂದು ತಿಳಿಸಿದರು.</p>.<p>ಡಾ.ರಮೇಶ ಗುಳ್ಳ, ಶಿವಪುತ್ರ ಯಾದವಾಡ ಮಾತನಾಡಿದರು.</p>.<p>ಭಾರತಿ ಪಾಟೀಲ, ವಿಲಾಸ ಕುಲಕರ್ಣಿ, ಎಂ.ಎನ್. ಅಸ್ಕಿ, ಭಾರತಿ ಬಿಜಾಪೂರೆ, ಎಸ್.ಟಿ. ಚಿಗರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>