<p><strong>ಅಥಣಿ:</strong> ‘ಬೇಡಿಕೆ ಇಲ್ಲದಿರುವುದು ಹಾಗೂ ಬೆಲೆ ಕುಸಿತದಿಂದ ನೊಂದ ತಾಲ್ಲೂಕಿನ ಝುಂಜರವಾಡ ಗ್ರಾಮದ ರೈತ ಸ್ವಪ್ನಿಲ್ ಪಾಟೀಲ ಅವರು ಮೂರು ಎಕರೆ ಕ್ಯಾಪ್ಸಿಕಂ (ದೊಡ್ಡಮೆಣಸಿನಕಾಯಿ) ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ನಾಶಪಡಿಸಿದರು.</p>.<p>ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತವರಿನಲ್ಲಿ ಈ ಘಟನೆ ನಡೆದಿದೆ.</p>.<p>‘ಲಾಕ್ಡೌನ್ ಸಡಿಲಿಕೆಯಾದರೂ ಕ್ಯಾಪ್ಸಿಕಂಗೆ ಬೇಡಿಕೆ ಇಲ್ಲ. ಹೀಗಾಗಿ, ಮುಂದಿನ ಬೆಳೆಗೆ ಭೂಮಿ ಹದಗೊಳಿಸಲು ನಾಶಪಡಿಸಿದ್ದೇನೆ. ಬೆಳೆ ಕೈಗೆ ಬಂದರೂ ಬಾಯಿಗೆ ಬರಲಿಲ್ಲ. ಇದರಿಂದ ಬಹಳ ಬೇಸರವಾಗಿದೆ. 3 ಎಕರೆಯಲ್ಲಿ ಕ್ಯಾಪ್ಸಿಕಂ ಬೆಳೆಯಲು ₹ 5 ಲಕ್ಷ ಖರ್ಚಾಗಿದೆ. ಸರ್ಕಾರ ಎಕರೆಗೆ ₹15 ಸಾವಿರ ಮಾತ್ರ ಘೋಷಿಸಿದೆ. ಅದು ಯಾವುದಕ್ಕೂ ಸಾಲದು’ ಎಂದು ಸ್ವಪ್ನಿಲ್ ತಿಳಿಸಿದರು.</p>.<p>‘ತರಕಾರಿ ಬೆಳೆದ ರೈತರಿಗೆ ಸರ್ಕಾರ ಪರಿಹಾರ ಘೋಷಿಸಿದೆ. ಆದರೆ ಈವರೆಗೂ ಸಂಬಂಧಪಟ್ಟ ಇಲಾಖೆಯವರು ಸ್ಪಂದಿಸಿಲ್ಲ ಹಾಗೂ ಯಾರಿಗೂ ಒಂದು ರೂಪಾಯಿ ಕೂಡ ಪರಿಹಾರವಾಗಿ ಬಂದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ:</strong> ‘ಬೇಡಿಕೆ ಇಲ್ಲದಿರುವುದು ಹಾಗೂ ಬೆಲೆ ಕುಸಿತದಿಂದ ನೊಂದ ತಾಲ್ಲೂಕಿನ ಝುಂಜರವಾಡ ಗ್ರಾಮದ ರೈತ ಸ್ವಪ್ನಿಲ್ ಪಾಟೀಲ ಅವರು ಮೂರು ಎಕರೆ ಕ್ಯಾಪ್ಸಿಕಂ (ದೊಡ್ಡಮೆಣಸಿನಕಾಯಿ) ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ನಾಶಪಡಿಸಿದರು.</p>.<p>ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತವರಿನಲ್ಲಿ ಈ ಘಟನೆ ನಡೆದಿದೆ.</p>.<p>‘ಲಾಕ್ಡೌನ್ ಸಡಿಲಿಕೆಯಾದರೂ ಕ್ಯಾಪ್ಸಿಕಂಗೆ ಬೇಡಿಕೆ ಇಲ್ಲ. ಹೀಗಾಗಿ, ಮುಂದಿನ ಬೆಳೆಗೆ ಭೂಮಿ ಹದಗೊಳಿಸಲು ನಾಶಪಡಿಸಿದ್ದೇನೆ. ಬೆಳೆ ಕೈಗೆ ಬಂದರೂ ಬಾಯಿಗೆ ಬರಲಿಲ್ಲ. ಇದರಿಂದ ಬಹಳ ಬೇಸರವಾಗಿದೆ. 3 ಎಕರೆಯಲ್ಲಿ ಕ್ಯಾಪ್ಸಿಕಂ ಬೆಳೆಯಲು ₹ 5 ಲಕ್ಷ ಖರ್ಚಾಗಿದೆ. ಸರ್ಕಾರ ಎಕರೆಗೆ ₹15 ಸಾವಿರ ಮಾತ್ರ ಘೋಷಿಸಿದೆ. ಅದು ಯಾವುದಕ್ಕೂ ಸಾಲದು’ ಎಂದು ಸ್ವಪ್ನಿಲ್ ತಿಳಿಸಿದರು.</p>.<p>‘ತರಕಾರಿ ಬೆಳೆದ ರೈತರಿಗೆ ಸರ್ಕಾರ ಪರಿಹಾರ ಘೋಷಿಸಿದೆ. ಆದರೆ ಈವರೆಗೂ ಸಂಬಂಧಪಟ್ಟ ಇಲಾಖೆಯವರು ಸ್ಪಂದಿಸಿಲ್ಲ ಹಾಗೂ ಯಾರಿಗೂ ಒಂದು ರೂಪಾಯಿ ಕೂಡ ಪರಿಹಾರವಾಗಿ ಬಂದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>