ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಹಾಮಳೆಗೆ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿರುವ ತಾಲ್ಲೂಕಿನ 12 ಶಾಲೆಗಳ 1,800 ಮಕ್ಕಳು ಶಿಕ್ಷಣದಿಂದ ವಂಚಿತವಾಗುವ ಸ್ಥಿತಿಗೆ ತಲುಪಿರವುದು ಆತಂಕಕ್ಕೆ ಕಾರಣವಾಗಿದೆ. ತಾಲ್ಲೂಕಿನ ಹಲ್ಯಾಳ, ದರೂರು, ನದಿ ಇಂಗಳಗಾಂವ, ತೀರ್ಥ, ಸಪ್ತಸಾಗರ, ಶೇಗುಣಸಿ, ಅವರಖೋಡ, ದೊಡ್ಡವಾಡ, ಸತ್ತಿ, ಸವದಿ, ದರ್ಗಾ, ಜನವಾಡ ಗ್ರಾಮಗಳ ಜನರು ಸ್ಥಳಾಂತರಗೊಳ್ಳುವಂತೆ ಬೆಳಗಾವಿ ಜಿಲ್ಲಾಡಳಿತ ತಿಳಿಸಿದೆ.