ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಥಣಿ: ಜಲಶಕ್ತಿ ಅಭಿಯಾನಕ್ಕೆ ಚಾಲನೆ

Last Updated 17 ಸೆಪ್ಟೆಂಬರ್ 2019, 13:56 IST
ಅಕ್ಷರ ಗಾತ್ರ

ಅಥಣಿ: ಇಲ್ಲಿನ ಪುರಸಭೆ ವತಿಯಿಂದ ಮಂಗಳವಾರ ಜಲಶಕ್ತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಉದ್ಘಾಟಿಸಿದ ಮುಖ್ಯಾಧಿಕಾರಿ ಮಹಾಂತೇಶ ಕವಲಾಪುರ ಮಾತನಾಡಿ, ‘ಪ್ರತಿಯೊಬ್ಬರೂ ನೀರಿನ ಬಗ್ಗೆ ಸಂಪೂರ್ಣವಾದ ತಿಳಿವಳಿಕೆ ಹೊಂದಬೇಕು. ಅಂತರ್ಜಲ ಮಟ್ಟ ಕುಸಿಯುತ್ತಿರುವುದರಿಂದ ಪ್ರತಿ ವರ್ಷ ನೀರಿನ ಸಮಸ್ಯೆ ಉಂಟಾಗುತ್ತಿದೆ. ಮುಂದೊಂದು ದಿನ ನೀರಿಗಾಗಿ ಯುದ್ಧ ನಡೆದರೂ ಆಶ್ಚರ್ಯ ಪಡಬೇಕಾಗಿಲ್ಲ. ಇದಕ್ಕೆ ಅವಕಾಶ ಕೊಡಬಾರದು. ನೀರನ್ನು ಹಿತಮಿತವಾಗಿ ಬಳಸಬೇಕು’ ಎಂದು ಸಲಹೆ ನೀಡಿದರು.

ಪ್ರಭಾರ ಸಿಡಿಪಿಒ ಉದಯ ಪಾಟೀಲ ಮಾತನಾಡಿ, ‘ನೀರಿನ ಉಳಿತಾಯ ಹಾಗೂ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ’ ಎಂದರು.

ಆರೋಗ್ಯ ಇಲಾಖೆ ಅಧಿಕಾರಿ ಮುರುಗೇಶ ಇಂಗಳಿ ಮಾತನಾಡಿದರು.

ಬಿ.ಎಂ. ಬೋಳಿಶೆಟ್ಟಿ ಸ್ವಾಗತಿಸಿದರು. ಎ.ಎಲ್. ನದಾಫ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT