ಉದ್ಘಾಟಿಸಿದ ಮುಖ್ಯಾಧಿಕಾರಿ ಮಹಾಂತೇಶ ಕವಲಾಪುರ ಮಾತನಾಡಿ, ‘ಪ್ರತಿಯೊಬ್ಬರೂ ನೀರಿನ ಬಗ್ಗೆ ಸಂಪೂರ್ಣವಾದ ತಿಳಿವಳಿಕೆ ಹೊಂದಬೇಕು. ಅಂತರ್ಜಲ ಮಟ್ಟ ಕುಸಿಯುತ್ತಿರುವುದರಿಂದ ಪ್ರತಿ ವರ್ಷ ನೀರಿನ ಸಮಸ್ಯೆ ಉಂಟಾಗುತ್ತಿದೆ. ಮುಂದೊಂದು ದಿನ ನೀರಿಗಾಗಿ ಯುದ್ಧ ನಡೆದರೂ ಆಶ್ಚರ್ಯ ಪಡಬೇಕಾಗಿಲ್ಲ. ಇದಕ್ಕೆ ಅವಕಾಶ ಕೊಡಬಾರದು. ನೀರನ್ನು ಹಿತಮಿತವಾಗಿ ಬಳಸಬೇಕು’ ಎಂದು ಸಲಹೆ ನೀಡಿದರು.