<p><strong>ಅಥಣಿ</strong>: ತಾಲ್ಲೂಕಿನ ಹೊಸಟ್ಟಿಯ ಸಿದ್ಧೇಶ್ವರ ವಿವಿಧೋದ್ಧೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷರಾಗಿ, ಶಾಸಕ ಲಕ್ಷ್ಮಣ ಸವದಿ ಬೆಂಬಲಿತ ಶಿವಾನಂದ ನಾಯಿಕ ಮತ್ತು ಉಪಾಧ್ಯಕ್ಷೆಯಾಗಿ ಭಾರತಿ ಹಲ್ಯಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಶಾಸಕ ಲಕ್ಷ್ಮಣ ಸವದಿ ಮಾತನಾಡಿ, ‘ಪ್ರಸಕ್ತ ವರ್ಷ 30 ಸಹಕಾರ ಸಂಘಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಗಳಲ್ಲಿ ಎಲ್ಲ ಸಹಕಾರ ಸಂಘಗಳಲ್ಲಿ ನಮ್ಮ ಬೆಂಬಲಿಗರೇ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ’ ಎಂದರು .</p>.<p>ನೂತನ ಅದ್ಯಕ್ಷ ಶಿವಾನಂದ ನಾಯಿಕ ಮಾತನಾಡಿ, ‘ಶಾಸಕ ಲಕ್ಷ್ಮಣ ಸವದಿಯವರ ಮಾರ್ಗದರ್ಶನದಲ್ಲಿ ಸೊಸೈಟಿ ಮುನ್ನಡೆಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ. ಪಾರದರ್ಶಕ ಆಡಳಿತ ನೀಡಿತ್ತೇವೆ’ ಎಂದು ಹೇಳಿದರು .</p>.<p>ಗ್ರಾಮದಲ್ಲಿ ಪಟಾಕಿ ಸಿಡಿಸಿ, ಗುಲಾಲ ಎರಚಿ ವಿಜಯೋತ್ಸವ ಆಚರಿಸಲಾಯಿತು. ಚುನಾವಣಾದಿಕಾರಿಯಾಗಿ ಆಶಾ ಬಿರಾದರ ಕಾರ್ಯ ನಿರ್ವಹಿಸಿದರು.</p>.<p>ಮುಖಂಡ ಶ್ರೀಶೈಲ ನಾಯಿಕ, ಹಣಮಂತ ನಾಯಿಕ, ಚಂದು ಪವಾರ, ಅಣ್ಣಪ್ಪಾ ನಾಯಿಕ, ರಾವಸಾಹೇಬ ನಾಯಿಕ, ರಾಜು ಹಣಮಾಪುರೆ, ನಿಂಗಪ್ಪ ಹಣಮಾಪುರೆ, ಕೃಷ್ಣಾ ಸರಗರ, ಪಾಂಡು ಹಲ್ಯಾಳ, ನೂರಾರು ಜನ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ</strong>: ತಾಲ್ಲೂಕಿನ ಹೊಸಟ್ಟಿಯ ಸಿದ್ಧೇಶ್ವರ ವಿವಿಧೋದ್ಧೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷರಾಗಿ, ಶಾಸಕ ಲಕ್ಷ್ಮಣ ಸವದಿ ಬೆಂಬಲಿತ ಶಿವಾನಂದ ನಾಯಿಕ ಮತ್ತು ಉಪಾಧ್ಯಕ್ಷೆಯಾಗಿ ಭಾರತಿ ಹಲ್ಯಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಶಾಸಕ ಲಕ್ಷ್ಮಣ ಸವದಿ ಮಾತನಾಡಿ, ‘ಪ್ರಸಕ್ತ ವರ್ಷ 30 ಸಹಕಾರ ಸಂಘಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಗಳಲ್ಲಿ ಎಲ್ಲ ಸಹಕಾರ ಸಂಘಗಳಲ್ಲಿ ನಮ್ಮ ಬೆಂಬಲಿಗರೇ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ’ ಎಂದರು .</p>.<p>ನೂತನ ಅದ್ಯಕ್ಷ ಶಿವಾನಂದ ನಾಯಿಕ ಮಾತನಾಡಿ, ‘ಶಾಸಕ ಲಕ್ಷ್ಮಣ ಸವದಿಯವರ ಮಾರ್ಗದರ್ಶನದಲ್ಲಿ ಸೊಸೈಟಿ ಮುನ್ನಡೆಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ. ಪಾರದರ್ಶಕ ಆಡಳಿತ ನೀಡಿತ್ತೇವೆ’ ಎಂದು ಹೇಳಿದರು .</p>.<p>ಗ್ರಾಮದಲ್ಲಿ ಪಟಾಕಿ ಸಿಡಿಸಿ, ಗುಲಾಲ ಎರಚಿ ವಿಜಯೋತ್ಸವ ಆಚರಿಸಲಾಯಿತು. ಚುನಾವಣಾದಿಕಾರಿಯಾಗಿ ಆಶಾ ಬಿರಾದರ ಕಾರ್ಯ ನಿರ್ವಹಿಸಿದರು.</p>.<p>ಮುಖಂಡ ಶ್ರೀಶೈಲ ನಾಯಿಕ, ಹಣಮಂತ ನಾಯಿಕ, ಚಂದು ಪವಾರ, ಅಣ್ಣಪ್ಪಾ ನಾಯಿಕ, ರಾವಸಾಹೇಬ ನಾಯಿಕ, ರಾಜು ಹಣಮಾಪುರೆ, ನಿಂಗಪ್ಪ ಹಣಮಾಪುರೆ, ಕೃಷ್ಣಾ ಸರಗರ, ಪಾಂಡು ಹಲ್ಯಾಳ, ನೂರಾರು ಜನ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>