<p><strong>ಅಥಣಿ: </strong>ಕ್ಷೇತ್ರದ ಉಪ ಚುನಾವಣೆ ಮತದಾನ ಗುರುವಾರ ಶಾಂತಿಯುತವಾಗಿ ನಡೆಯಿತು.</p>.<p>‘ಹಿಂದಿನ ಯಾವುದೇ ಚುನಾವಣೆಯಲ್ಲೂ ಇಷ್ಟೊಂದು ಶಾಂತಿಯುತವಾಗಿ ಮತದಾನ ನಡೆದಿರಲಿಲ್ಲ. ಈ ನಿಟ್ಟಿನಲ್ಲಿ ನೋಡಿದರೆ ಹೊಸ ದಾಖಲೆ ಸೃಷ್ಟಿಯಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ’ ಎಂದು ತಾಲ್ಲೂಕು ಆಡಳಿತ ತಿಳಿಸಿದೆ.</p>.<p>‘ಯಾವುದೇ ಮತಗಟ್ಟೆಯಲ್ಲೂ ಯಾವುದೇ ಪಕ್ಷದ ಕಾರ್ಯಕರ್ತರು ಕೂಡ ತೊಂದರೆ ಕೊಟ್ಟಿಲ್ಲ. ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಯಲು ಎಲ್ಲರೂ ಸಹಕಾರ ಕೊಟ್ಟಿದ್ದಾರೆ. ಬೆಳಿಗ್ಗೆಯಿಂದ ಸಂಜೆವರೆಗೂ ಮತದಾರರು ಉತ್ಸಾಹದಿಂದ ಬಂದು ಮತ ಹಕ್ಕು ಚಲಾಯಿಸಿದರು’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಪಟ್ಟಣದಲ್ಲಿ ನಿರಸ ಪ್ರತಿಕ್ರಿಯೆ ಕಂಡುಬಂತು. ಇಲ್ಲಿ ಹಲವು ಮತಗಟ್ಟೆಗಳಿದ್ದರೂ ಬೆಳಿಗ್ಗೆಯಿಂದಲೂ ಸಂಜೆವರೆಗೂ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೆಲವು ಕಡೆಗಳ ಮತಗಟ್ಟೆ ಸಮೀಪದಲ್ಲಿ ಏಜೆಂಟರೇ ಹೆಚ್ಚಾಗಿದ್ದರು. ಆದರೆ, ಹಳ್ಳಿಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>ಮಹಿಳೆಯರಿಗಾಗಿ ಪಟ್ಟಣದ ಅಬ್ದುಲ್ ಕಲಾಂ ಪ್ರೌಢಶಾಲೆಯಲ್ಲಿ ‘ಸಖಿ’ ಮತಗಟ್ಟೆ ಸ್ಥಾಪಿಸಲಾಗಿತ್ತು. ಇದು ಎಲ್ಲರ ಗಮನಸೆಳೆಯಿತು. ಇಡೀ ಮತಗಟ್ಟೆಯನ್ನು ಪಿಂಕ್ ಬಣ್ಣದಿಂದ ಅಲಂಕರಿಸಲಾಗಿತ್ತು. ಬಲೂಲುಗಳಿಂದ ಸ್ವಾಗತ ಕಮಾನು ಹಾಕಲಾಗಿತ್ತು. ಮಹಿಳಾ ಸಿಬ್ಬಂದಿಯನ್ನೇ ನಿಯೋಜಿಸಲಾಗಿತ್ತು. ಸಿಬ್ಬಂದಿಯು ಇಳಕಲ್ ಸೀರೆ ಧರಿಸಿ ಸಂಭ್ರಮದಿಂದ ಕಾರ್ಯನಿರ್ವಹಿಸಿದ್ದು ವಿಶೇಷವಾಗಿತ್ತು.</p>.<p><strong>ಮಕ್ಕಳ ಸೇವೆ:</strong> ಅಂಗವಿಕಲರು, ವಯೋವೃದ್ಧರನ್ನು ಮತ ಕೇಂದ್ರಕ್ಕೆ ಕರೆದುಕೊಂಡು ಹೋಗಲು ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಸಹಾಯ ಮಾಡಿದರು. ಮತದಾರರಿಗೆ ನೆರವಾದರು.</p>.<p>ಅಥಣಿಯ ಮತಗಟ್ಟೆಯೊಂದರಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಭಾವಚಿತ್ರವನ್ನು ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಅವರ ಫೋಟೊ ಪಕ್ಕದಲ್ಲಿಟ್ಟು ಮತದಾನ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿದೆ. ಯಾವ ಮತಗಟ್ಟೆಯಲ್ಲಿ ಈ ಪ್ರಸಂಗ ನಡೆದಿದೆ ಎನ್ನುವುದು ಸ್ಪಷ್ಟವಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ: </strong>ಕ್ಷೇತ್ರದ ಉಪ ಚುನಾವಣೆ ಮತದಾನ ಗುರುವಾರ ಶಾಂತಿಯುತವಾಗಿ ನಡೆಯಿತು.</p>.<p>‘ಹಿಂದಿನ ಯಾವುದೇ ಚುನಾವಣೆಯಲ್ಲೂ ಇಷ್ಟೊಂದು ಶಾಂತಿಯುತವಾಗಿ ಮತದಾನ ನಡೆದಿರಲಿಲ್ಲ. ಈ ನಿಟ್ಟಿನಲ್ಲಿ ನೋಡಿದರೆ ಹೊಸ ದಾಖಲೆ ಸೃಷ್ಟಿಯಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ’ ಎಂದು ತಾಲ್ಲೂಕು ಆಡಳಿತ ತಿಳಿಸಿದೆ.</p>.<p>‘ಯಾವುದೇ ಮತಗಟ್ಟೆಯಲ್ಲೂ ಯಾವುದೇ ಪಕ್ಷದ ಕಾರ್ಯಕರ್ತರು ಕೂಡ ತೊಂದರೆ ಕೊಟ್ಟಿಲ್ಲ. ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಯಲು ಎಲ್ಲರೂ ಸಹಕಾರ ಕೊಟ್ಟಿದ್ದಾರೆ. ಬೆಳಿಗ್ಗೆಯಿಂದ ಸಂಜೆವರೆಗೂ ಮತದಾರರು ಉತ್ಸಾಹದಿಂದ ಬಂದು ಮತ ಹಕ್ಕು ಚಲಾಯಿಸಿದರು’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಪಟ್ಟಣದಲ್ಲಿ ನಿರಸ ಪ್ರತಿಕ್ರಿಯೆ ಕಂಡುಬಂತು. ಇಲ್ಲಿ ಹಲವು ಮತಗಟ್ಟೆಗಳಿದ್ದರೂ ಬೆಳಿಗ್ಗೆಯಿಂದಲೂ ಸಂಜೆವರೆಗೂ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೆಲವು ಕಡೆಗಳ ಮತಗಟ್ಟೆ ಸಮೀಪದಲ್ಲಿ ಏಜೆಂಟರೇ ಹೆಚ್ಚಾಗಿದ್ದರು. ಆದರೆ, ಹಳ್ಳಿಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>ಮಹಿಳೆಯರಿಗಾಗಿ ಪಟ್ಟಣದ ಅಬ್ದುಲ್ ಕಲಾಂ ಪ್ರೌಢಶಾಲೆಯಲ್ಲಿ ‘ಸಖಿ’ ಮತಗಟ್ಟೆ ಸ್ಥಾಪಿಸಲಾಗಿತ್ತು. ಇದು ಎಲ್ಲರ ಗಮನಸೆಳೆಯಿತು. ಇಡೀ ಮತಗಟ್ಟೆಯನ್ನು ಪಿಂಕ್ ಬಣ್ಣದಿಂದ ಅಲಂಕರಿಸಲಾಗಿತ್ತು. ಬಲೂಲುಗಳಿಂದ ಸ್ವಾಗತ ಕಮಾನು ಹಾಕಲಾಗಿತ್ತು. ಮಹಿಳಾ ಸಿಬ್ಬಂದಿಯನ್ನೇ ನಿಯೋಜಿಸಲಾಗಿತ್ತು. ಸಿಬ್ಬಂದಿಯು ಇಳಕಲ್ ಸೀರೆ ಧರಿಸಿ ಸಂಭ್ರಮದಿಂದ ಕಾರ್ಯನಿರ್ವಹಿಸಿದ್ದು ವಿಶೇಷವಾಗಿತ್ತು.</p>.<p><strong>ಮಕ್ಕಳ ಸೇವೆ:</strong> ಅಂಗವಿಕಲರು, ವಯೋವೃದ್ಧರನ್ನು ಮತ ಕೇಂದ್ರಕ್ಕೆ ಕರೆದುಕೊಂಡು ಹೋಗಲು ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಸಹಾಯ ಮಾಡಿದರು. ಮತದಾರರಿಗೆ ನೆರವಾದರು.</p>.<p>ಅಥಣಿಯ ಮತಗಟ್ಟೆಯೊಂದರಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಭಾವಚಿತ್ರವನ್ನು ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಅವರ ಫೋಟೊ ಪಕ್ಕದಲ್ಲಿಟ್ಟು ಮತದಾನ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿದೆ. ಯಾವ ಮತಗಟ್ಟೆಯಲ್ಲಿ ಈ ಪ್ರಸಂಗ ನಡೆದಿದೆ ಎನ್ನುವುದು ಸ್ಪಷ್ಟವಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>