<p><strong>ಬೆಳಗಾವಿ</strong>: ‘ಬಿಡಿಸಿಸಿ ಬ್ಯಾಂಕಿನ ನೌಕರರ ಸಂಘದ ಅಧ್ಯಕ್ಷನ ಮೇಲೆ ಶಾಸಕ ಲಕ್ಷ್ಮಣ ಸವದಿ, ಅವರ ಪುತ್ರ ಚಿದಾನಂದ ಸವದಿ ಮತ್ತು ಬೆಂಬಲಿಗರು ಹಲ್ಲೆ ನಡೆಸಿರುವುದು ಖಂಡನೀಯ. ಇದನ್ನು ಗಮನಿಸಿದರೆ ಅಥಣಿ ಬಿಹಾರ ಆಗುತ್ತಿದೆ ಎನಿಸುತ್ತಿದೆ’ ಎಂದು ಮಾಜಿ ಶಾಸಕ ಮಹೇಶ ಕುಮಠಳ್ಳಿ ದೂರಿದರು.</p><p>ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲಕ್ಷ್ಮಣ ಸವದಿ ಅಳಿಯನನ್ನು ನಿಯಮಾನುಸಾರವೇ ಅಥಣಿ ಶಾಖೆಯಿಂದ ಬೆಳಗಾವಿಗೆ ವರ್ಗಾವಣೆ ಮಾಡಲಾಗಿದೆ. ಹೀಗಿರುವಾಗ ಮನೆಗೆ ಬಂದವರ ಮೇಲೆ ಜವಾಬ್ದಾರಿ ಸ್ಥಾನದಲ್ಲಿರುವ ಇರುವ ಸವದಿ ಹಲ್ಲೆ ನಡೆಸಿರುವುದು ಸರಿಯಲ್ಲ’ ಎಂದು ಆರೋಪಿಸಿದರು.</p><p>‘ಈ ಹಿಂದೆ ಬೇರೆಯವರ ಕಡೆಯಿಂದ ಇಂಥ ಕೃತ್ಯ ಮಾಡಿಸುತ್ತಿದ್ದರು. ಈಗ ಅವರೇ ಮಾಡಿದ್ದಾರೆ. ಪೊಲೀಸರೂ ಅವರ ಕಪಿಮುಷ್ಠಿಯಲ್ಲಿದ್ದಾರೆ. ಜನರಿಗೆ ರಕ್ಷಣೆ ನೀಡುವವರೇ ಅವರು ಹೇಳಿದಂತೆ ಕೇಳಿದರೆ ಸರಿಯಲ್ಲ. ಇದು ಶಾಸಕರು ಮಾಡುತ್ತಿರುವ ದ್ವೇಷದ ರಾಜಕಾರಣ’ ಎಂದು ಆಪಾದಿಸಿದರು.</p><p>‘ಅಥಣಿಯಲ್ಲಿ ಸವದಿ ಕುಟುಂಬದವರು ದಬ್ಬಾಳಿಕೆ ಮಾಡುತ್ತಿದ್ದಾರೆ. ಕನಿಷ್ಠ ಪಕ್ಷ ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬಹುದಿತ್ತು. ಆ ಕೆಲಸವೂ ಆಗಿಲ್ಲ. ಪೊಲೀಸರೂ ಹಲ್ಲೆಗೊಳಗಾದವರ ಮೇಲೆ ಪ್ರಕರಣ ದಾಖಲಿಸಲು ಪ್ರಯತ್ನಿಸಿದ್ದನ್ನು ಮಾಧ್ಯಮದಲ್ಲಿ ನೋಡಿದ್ದೇನೆ. ಈ ಘಟನೆಗೆ ಸಂಬಂಧಿಸಿ ಪೊಲೀಸರೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಬಿಡಿಸಿಸಿ ಬ್ಯಾಂಕಿನ ನೌಕರರ ಸಂಘದ ಅಧ್ಯಕ್ಷನ ಮೇಲೆ ಶಾಸಕ ಲಕ್ಷ್ಮಣ ಸವದಿ, ಅವರ ಪುತ್ರ ಚಿದಾನಂದ ಸವದಿ ಮತ್ತು ಬೆಂಬಲಿಗರು ಹಲ್ಲೆ ನಡೆಸಿರುವುದು ಖಂಡನೀಯ. ಇದನ್ನು ಗಮನಿಸಿದರೆ ಅಥಣಿ ಬಿಹಾರ ಆಗುತ್ತಿದೆ ಎನಿಸುತ್ತಿದೆ’ ಎಂದು ಮಾಜಿ ಶಾಸಕ ಮಹೇಶ ಕುಮಠಳ್ಳಿ ದೂರಿದರು.</p><p>ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲಕ್ಷ್ಮಣ ಸವದಿ ಅಳಿಯನನ್ನು ನಿಯಮಾನುಸಾರವೇ ಅಥಣಿ ಶಾಖೆಯಿಂದ ಬೆಳಗಾವಿಗೆ ವರ್ಗಾವಣೆ ಮಾಡಲಾಗಿದೆ. ಹೀಗಿರುವಾಗ ಮನೆಗೆ ಬಂದವರ ಮೇಲೆ ಜವಾಬ್ದಾರಿ ಸ್ಥಾನದಲ್ಲಿರುವ ಇರುವ ಸವದಿ ಹಲ್ಲೆ ನಡೆಸಿರುವುದು ಸರಿಯಲ್ಲ’ ಎಂದು ಆರೋಪಿಸಿದರು.</p><p>‘ಈ ಹಿಂದೆ ಬೇರೆಯವರ ಕಡೆಯಿಂದ ಇಂಥ ಕೃತ್ಯ ಮಾಡಿಸುತ್ತಿದ್ದರು. ಈಗ ಅವರೇ ಮಾಡಿದ್ದಾರೆ. ಪೊಲೀಸರೂ ಅವರ ಕಪಿಮುಷ್ಠಿಯಲ್ಲಿದ್ದಾರೆ. ಜನರಿಗೆ ರಕ್ಷಣೆ ನೀಡುವವರೇ ಅವರು ಹೇಳಿದಂತೆ ಕೇಳಿದರೆ ಸರಿಯಲ್ಲ. ಇದು ಶಾಸಕರು ಮಾಡುತ್ತಿರುವ ದ್ವೇಷದ ರಾಜಕಾರಣ’ ಎಂದು ಆಪಾದಿಸಿದರು.</p><p>‘ಅಥಣಿಯಲ್ಲಿ ಸವದಿ ಕುಟುಂಬದವರು ದಬ್ಬಾಳಿಕೆ ಮಾಡುತ್ತಿದ್ದಾರೆ. ಕನಿಷ್ಠ ಪಕ್ಷ ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬಹುದಿತ್ತು. ಆ ಕೆಲಸವೂ ಆಗಿಲ್ಲ. ಪೊಲೀಸರೂ ಹಲ್ಲೆಗೊಳಗಾದವರ ಮೇಲೆ ಪ್ರಕರಣ ದಾಖಲಿಸಲು ಪ್ರಯತ್ನಿಸಿದ್ದನ್ನು ಮಾಧ್ಯಮದಲ್ಲಿ ನೋಡಿದ್ದೇನೆ. ಈ ಘಟನೆಗೆ ಸಂಬಂಧಿಸಿ ಪೊಲೀಸರೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>