<p><strong>ಬೆಳಗಾವಿ:</strong> ತಾಲ್ಲೂಕಿನ ಸಾಂಬ್ರಾ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಕಳ್ಳರು, ಗ್ಯಾಸ್ ಕಟರ್ನಿಂದ ಯಂತ್ರ ಮುರಿದು ₹75,600 ಹಣ ದೋಚಿದ್ದಾರೆ.</p><p>ಕೇಂದ್ರದೊಳಗೆ ಬಂದ ಏಳೇ ನಿಮಿಷದಲ್ಲಿ ಈ ಕೃತ್ಯ ಎಸಗಿದ್ದಾರೆ. ಸಾಂಬ್ರಾ ಗ್ರಾಮದ ಮುಖ್ಯರಸ್ತೆಯಲ್ಲೇ ಈ ಎಟಿಎಂ ಕೇಂದ್ರವಿದೆ. ಇಲ್ಲಿ ಸದಾ ವಾಹನದಟ್ಟಣೆ ಮತ್ತು ಜನದಟ್ಟಣೆ ಇರುತ್ತದೆ. ಆದರೂ, ಕಳ್ಳತನ ನಡೆದಿರುವುದು ಅಚ್ಚರಿಗೆ ಕಾರಣವಾಗಿದೆ.</p><p>ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಬುಧವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p><p>ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಮೂವರು ಮುಸುಕುಧಾರಿಗಳು ಗ್ಯಾಸ್ ಕಟರ್ ಬಳಸಿ ಈ ಕೃತ್ಯ ಎಸಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರಂಭದಲ್ಲಿ ಬಣ್ಣದ ಸ್ಪ್ರೇ ಮಾಡಿ ಕ್ಯಾಮೆರಾ ಬಂದ್ಗೊಳಿಸಿದ್ದಾರೆ. ಆಗ ಬ್ಯಾಂಕ್ ಕಂಟ್ರೋಲ್ ರೂಂಗೆ ಮಾಹಿತಿ ರವಾನೆಯಾಗಿದ್ದು, ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಆದರೆ, ಪೊಲೀಸರು ಅಲ್ಲಿಗೆ ತೆರಳುವಷ್ಟರಲ್ಲಿ ಕಳ್ಳರು ಪರಾರಿಯಾಗಿದ್ದಾರೆ’ ಎಂದರು.</p><p>‘ಈ ಎಟಿಎಂ ಕೇಂದ್ರದಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಆರೋಪಿಗಳನ್ನು ಪತ್ತೆ ಮಾಡಲು ಮೂರು ತಂಡ ರಚಿಸಿದ್ದು, ಶೀಘ್ರ ಆರೋಪಿಗಳನ್ನು ಬಂಧಿಸುತ್ತೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ತಾಲ್ಲೂಕಿನ ಸಾಂಬ್ರಾ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಕಳ್ಳರು, ಗ್ಯಾಸ್ ಕಟರ್ನಿಂದ ಯಂತ್ರ ಮುರಿದು ₹75,600 ಹಣ ದೋಚಿದ್ದಾರೆ.</p><p>ಕೇಂದ್ರದೊಳಗೆ ಬಂದ ಏಳೇ ನಿಮಿಷದಲ್ಲಿ ಈ ಕೃತ್ಯ ಎಸಗಿದ್ದಾರೆ. ಸಾಂಬ್ರಾ ಗ್ರಾಮದ ಮುಖ್ಯರಸ್ತೆಯಲ್ಲೇ ಈ ಎಟಿಎಂ ಕೇಂದ್ರವಿದೆ. ಇಲ್ಲಿ ಸದಾ ವಾಹನದಟ್ಟಣೆ ಮತ್ತು ಜನದಟ್ಟಣೆ ಇರುತ್ತದೆ. ಆದರೂ, ಕಳ್ಳತನ ನಡೆದಿರುವುದು ಅಚ್ಚರಿಗೆ ಕಾರಣವಾಗಿದೆ.</p><p>ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಬುಧವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p><p>ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಮೂವರು ಮುಸುಕುಧಾರಿಗಳು ಗ್ಯಾಸ್ ಕಟರ್ ಬಳಸಿ ಈ ಕೃತ್ಯ ಎಸಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರಂಭದಲ್ಲಿ ಬಣ್ಣದ ಸ್ಪ್ರೇ ಮಾಡಿ ಕ್ಯಾಮೆರಾ ಬಂದ್ಗೊಳಿಸಿದ್ದಾರೆ. ಆಗ ಬ್ಯಾಂಕ್ ಕಂಟ್ರೋಲ್ ರೂಂಗೆ ಮಾಹಿತಿ ರವಾನೆಯಾಗಿದ್ದು, ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಆದರೆ, ಪೊಲೀಸರು ಅಲ್ಲಿಗೆ ತೆರಳುವಷ್ಟರಲ್ಲಿ ಕಳ್ಳರು ಪರಾರಿಯಾಗಿದ್ದಾರೆ’ ಎಂದರು.</p><p>‘ಈ ಎಟಿಎಂ ಕೇಂದ್ರದಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಆರೋಪಿಗಳನ್ನು ಪತ್ತೆ ಮಾಡಲು ಮೂರು ತಂಡ ರಚಿಸಿದ್ದು, ಶೀಘ್ರ ಆರೋಪಿಗಳನ್ನು ಬಂಧಿಸುತ್ತೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>