<p>ಚಿಕ್ಕೋಡಿ: ಚಿಕ್ಕೋಡಿ ಪಟ್ಟಣ ಹಾಗೂ ತಾಲ್ಲೂಕಿನ ಅಂಕಲಿಯಲ್ಲಿ ಕಳೆದ ನ.9ರಂದು ಎಟಿಎಂ ದೋಚಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬೀದರ್ ಜಿಲ್ಲಾ ಪೊಲೀಸರು ಬಂಧಿಸಿದ್ದು, ಚಿಕ್ಕೋಡಿ ಪೊಲೀಸರು ಗುರುವಾರ ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ.</p>.<p>ಹರಿಯಾಣ ಮೂಲದ ಶಾಹಿದ್ ಕಮಲಖಾನ್ (45), ಅಲೀಮ್ ಅಕ್ಬರ ಖಾನ್ (26), ಇಲಿಯಾಸ್ ಅಬ್ದುಲ್ ರೆಹಮಾನ್ ಖಾನ್ (45) ಬಂಧಿತರು.</p>.<p>ಚಿಕ್ಕೋಡಿ ಪಟ್ಟಣದಲ್ಲಿ ಎಸ್ಬಿಐ ಎಟಿಎಂ ಹಾಗೂ ಅಂಕಲಿ ಗ್ರಾಮದ ಎಕ್ಸಿಸ್ ಬ್ಯಾಂಕ್ ಎಟಿಎಂ ಗಳನ್ನು ಗ್ಯಾಸ್ ಕಟರ್ನಿಂದ ಒಡೆದು ₹23 ಲಕ್ಷಕ್ಕೂ ಹೆಚ್ಚು ಹಣವನ್ನು ದೋಚಿದ್ದರು. ಅಂದಿನಿಂದ ಚಿಕ್ಕೋಡಿ ಪೊಲೀಸರು ಕಳ್ಳರಿಗಾಗಿ ಬಲೆ ಬೀಸಿದ್ದರು. ಬೀದರ್ ಜಿಲ್ಲೆಯ ಹಳ್ಳಿಖೇಡ ಪಟ್ಟಣದಲ್ಲಿ ಎಟಿಎಂ ಒಡೆಯುವಾಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.</p>.<p>ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಹರಿಯಾಣ ರಾಜ್ಯಗಳಲ್ಲಿ 12 ಎಟಿಎಂಗಳಲ್ಲಿ ಬಂಧಿತ ಆರೋಪಿಗಳು ಕಳವು ಮಾಡಿದ್ದರು. ಚಿಕ್ಕೋಡಿ, ಅಂಕಲಿ ಠಾಣೆ ಪೊಲೀಸರು ಕಳೆದ ನಾಲ್ಕು ತಿಂಗಳಿನಿಂದ ಎಟಿಎಂ ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದರು. ಬಂಧಿತರಿಂದ ₹9.5 ಲಕ್ಷ ನಗದು, ₹15 ಲಕ್ಷ ಮೌಲ್ಯದ ಕಾರ್, ಕಳ್ಳತನಕ್ಕೆ ಬಳಸುತ್ತಿದ್ದ ಆಕ್ಸಿಜನ್ ಸಿಲಿಂಡರ್, ಗ್ಯಾಸ್ ಸಿಲಿಂಡರ್, ವಿವಿಧ ನಂಬರ್ ಪ್ಲೇಟ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕೋಡಿ: ಚಿಕ್ಕೋಡಿ ಪಟ್ಟಣ ಹಾಗೂ ತಾಲ್ಲೂಕಿನ ಅಂಕಲಿಯಲ್ಲಿ ಕಳೆದ ನ.9ರಂದು ಎಟಿಎಂ ದೋಚಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬೀದರ್ ಜಿಲ್ಲಾ ಪೊಲೀಸರು ಬಂಧಿಸಿದ್ದು, ಚಿಕ್ಕೋಡಿ ಪೊಲೀಸರು ಗುರುವಾರ ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ.</p>.<p>ಹರಿಯಾಣ ಮೂಲದ ಶಾಹಿದ್ ಕಮಲಖಾನ್ (45), ಅಲೀಮ್ ಅಕ್ಬರ ಖಾನ್ (26), ಇಲಿಯಾಸ್ ಅಬ್ದುಲ್ ರೆಹಮಾನ್ ಖಾನ್ (45) ಬಂಧಿತರು.</p>.<p>ಚಿಕ್ಕೋಡಿ ಪಟ್ಟಣದಲ್ಲಿ ಎಸ್ಬಿಐ ಎಟಿಎಂ ಹಾಗೂ ಅಂಕಲಿ ಗ್ರಾಮದ ಎಕ್ಸಿಸ್ ಬ್ಯಾಂಕ್ ಎಟಿಎಂ ಗಳನ್ನು ಗ್ಯಾಸ್ ಕಟರ್ನಿಂದ ಒಡೆದು ₹23 ಲಕ್ಷಕ್ಕೂ ಹೆಚ್ಚು ಹಣವನ್ನು ದೋಚಿದ್ದರು. ಅಂದಿನಿಂದ ಚಿಕ್ಕೋಡಿ ಪೊಲೀಸರು ಕಳ್ಳರಿಗಾಗಿ ಬಲೆ ಬೀಸಿದ್ದರು. ಬೀದರ್ ಜಿಲ್ಲೆಯ ಹಳ್ಳಿಖೇಡ ಪಟ್ಟಣದಲ್ಲಿ ಎಟಿಎಂ ಒಡೆಯುವಾಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.</p>.<p>ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಹರಿಯಾಣ ರಾಜ್ಯಗಳಲ್ಲಿ 12 ಎಟಿಎಂಗಳಲ್ಲಿ ಬಂಧಿತ ಆರೋಪಿಗಳು ಕಳವು ಮಾಡಿದ್ದರು. ಚಿಕ್ಕೋಡಿ, ಅಂಕಲಿ ಠಾಣೆ ಪೊಲೀಸರು ಕಳೆದ ನಾಲ್ಕು ತಿಂಗಳಿನಿಂದ ಎಟಿಎಂ ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದರು. ಬಂಧಿತರಿಂದ ₹9.5 ಲಕ್ಷ ನಗದು, ₹15 ಲಕ್ಷ ಮೌಲ್ಯದ ಕಾರ್, ಕಳ್ಳತನಕ್ಕೆ ಬಳಸುತ್ತಿದ್ದ ಆಕ್ಸಿಜನ್ ಸಿಲಿಂಡರ್, ಗ್ಯಾಸ್ ಸಿಲಿಂಡರ್, ವಿವಿಧ ನಂಬರ್ ಪ್ಲೇಟ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>