<p><strong>ಬೆಳಗಾವಿ:</strong> ಮಲೇಷ್ಯಾದ ಕೌಲಾಲಂಪುರದಲ್ಲಿ 2026ರ ಜ.12ರಿಂದ 17ರವರೆಗೆ ನಡೆಯಲಿರುವ ಅಂತರರಾಷ್ಟ್ರೀಯ ಕುಸ್ತಿ ಟೂರ್ನಿಯಲ್ಲಿ ಭಾರತೀಯ ಕುಸ್ತಿ ತಂಡಕ್ಕೆ ಮುಖ್ಯ ತರಬೇತುದಾರರಾಗಿ ತಾಲ್ಲೂಕಿನ ಮುಚ್ಚಂಡಿಯ ಅಂತರರಾಷ್ಟ್ರೀಯ ಕುಸ್ತಿಪಟು ಅತುಲ್ ಶಿರೋಲೆ ಅವರನ್ನು ನೇಮಿಸಲಾಗಿದೆ.</p><p>ಇಂಟರ್ನ್ಯಾಷನಲ್ ಒಲಿಂಪಿಕ್ಸ್ ಸ್ಪೋರ್ಟ್ಸ್ ಆರ್ಗನೈಸೇಷನ್ ಕಮಿಟಿ ಹಾಗೂ ವರ್ಲ್ಡ್ ಫೆಡರೇಷನ್ ಆಫ್ ಮಿಷನ್ ಒಲಿಂಪಿಕ್ಸ್ ಗೇಮ್ಸ್ ಅಸೋಸಿಯೇಷನ್ ಈ ಟೂರ್ನಿ ಆಯೋಜಿಸಿದೆ.</p><p>ಪೈಲ್ವಾನರ ಮನೆತನದ ಹಿನ್ನೆಲೆಯಿಂದ ಬಂದಿರುವ 29 ವರ್ಷ ವಯಸ್ಸಿನ ಅತುಲ್, ಅಂತರರಾಷ್ಟ್ರೀಯ ಟೂರ್ನಿಗಳಲ್ಲಿ 2 ಕಂಚಿನ ಪದಕ ಗಳಿಸಿದ್ದಾರೆ. ರಾಷ್ಟ್ರ ಮತ್ತು ರಾಜ್ಯಮಟ್ಟದ ಟೂರ್ನಿಗಳಲ್ಲಿ 3 ಚಿನ್ನ, 2 ಬೆಳ್ಳಿ ಮತ್ತು 3 ಕಂಚಿನ ಪದಕ ಅವರಿಗೆ ಒಲಿದಿವೆ. ಸದ್ಯ ಮರಾಠ ಮಂಡಳ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.</p><p>‘ಭಾರತ ಕುಸ್ತಿ ತಂಡದ ಮುಖ್ಯ ತರಬೇತುದಾರರಾಗಿ ಆಯ್ಕೆಯಾಗಿರುವುದು ಖುಷಿ ತಂದಿದೆ. ಟೂರ್ನಿಗೂ ಮುನ್ನ ಮುಂಬೈನಲ್ಲಿ ನಡೆಯಲಿರುವ ಶಿಬಿರದಲ್ಲಿ ಪಾಲ್ಗೊಳ್ಳುವೆ. ಭಾರತಕ್ಕೆ ಹೆಚ್ಚಿನ ಪದಕಗಳನ್ನು ತರುವುದೇ ನನ್ನ ಗುರಿ’ ಎಂದು ಅತುಲ್ ಶಿರೋಲೆ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಮಲೇಷ್ಯಾದ ಕೌಲಾಲಂಪುರದಲ್ಲಿ 2026ರ ಜ.12ರಿಂದ 17ರವರೆಗೆ ನಡೆಯಲಿರುವ ಅಂತರರಾಷ್ಟ್ರೀಯ ಕುಸ್ತಿ ಟೂರ್ನಿಯಲ್ಲಿ ಭಾರತೀಯ ಕುಸ್ತಿ ತಂಡಕ್ಕೆ ಮುಖ್ಯ ತರಬೇತುದಾರರಾಗಿ ತಾಲ್ಲೂಕಿನ ಮುಚ್ಚಂಡಿಯ ಅಂತರರಾಷ್ಟ್ರೀಯ ಕುಸ್ತಿಪಟು ಅತುಲ್ ಶಿರೋಲೆ ಅವರನ್ನು ನೇಮಿಸಲಾಗಿದೆ.</p><p>ಇಂಟರ್ನ್ಯಾಷನಲ್ ಒಲಿಂಪಿಕ್ಸ್ ಸ್ಪೋರ್ಟ್ಸ್ ಆರ್ಗನೈಸೇಷನ್ ಕಮಿಟಿ ಹಾಗೂ ವರ್ಲ್ಡ್ ಫೆಡರೇಷನ್ ಆಫ್ ಮಿಷನ್ ಒಲಿಂಪಿಕ್ಸ್ ಗೇಮ್ಸ್ ಅಸೋಸಿಯೇಷನ್ ಈ ಟೂರ್ನಿ ಆಯೋಜಿಸಿದೆ.</p><p>ಪೈಲ್ವಾನರ ಮನೆತನದ ಹಿನ್ನೆಲೆಯಿಂದ ಬಂದಿರುವ 29 ವರ್ಷ ವಯಸ್ಸಿನ ಅತುಲ್, ಅಂತರರಾಷ್ಟ್ರೀಯ ಟೂರ್ನಿಗಳಲ್ಲಿ 2 ಕಂಚಿನ ಪದಕ ಗಳಿಸಿದ್ದಾರೆ. ರಾಷ್ಟ್ರ ಮತ್ತು ರಾಜ್ಯಮಟ್ಟದ ಟೂರ್ನಿಗಳಲ್ಲಿ 3 ಚಿನ್ನ, 2 ಬೆಳ್ಳಿ ಮತ್ತು 3 ಕಂಚಿನ ಪದಕ ಅವರಿಗೆ ಒಲಿದಿವೆ. ಸದ್ಯ ಮರಾಠ ಮಂಡಳ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.</p><p>‘ಭಾರತ ಕುಸ್ತಿ ತಂಡದ ಮುಖ್ಯ ತರಬೇತುದಾರರಾಗಿ ಆಯ್ಕೆಯಾಗಿರುವುದು ಖುಷಿ ತಂದಿದೆ. ಟೂರ್ನಿಗೂ ಮುನ್ನ ಮುಂಬೈನಲ್ಲಿ ನಡೆಯಲಿರುವ ಶಿಬಿರದಲ್ಲಿ ಪಾಲ್ಗೊಳ್ಳುವೆ. ಭಾರತಕ್ಕೆ ಹೆಚ್ಚಿನ ಪದಕಗಳನ್ನು ತರುವುದೇ ನನ್ನ ಗುರಿ’ ಎಂದು ಅತುಲ್ ಶಿರೋಲೆ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>