ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕ ಕುಟುಂಬಗಳಿಗೆ ಹಾಸ್ಟೆಲ್‌ನಲ್ಲಿ ಆಶ್ರಯ

Last Updated 30 ಮಾರ್ಚ್ 2020, 14:21 IST
ಅಕ್ಷರ ಗಾತ್ರ

ಬೆಳಗಾವಿ: ಬೆಂಗಳೂರಿನಿಂದ ರಾಜಸ್ಥಾನಕ್ಕೆ ಲಾರಿಯಲ್ಲಿ ತೆರಳುತ್ತಿದ್ದ ಕಾರ್ಮಿಕರ ಕುಟುಂಬದವರನ್ನು ಇಲ್ಲಿನ ಪೊಲೀಸರು ಸೋಮವಾರ ತಡೆದಿದ್ದಾರೆ.

ಅವರಿಗೆ ಇಲ್ಲಿನ ನೆಹರು ನಗರದ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ನಲ್ಲಿ ಆಶ್ರಯ ಕಲ್ಪಿಸಲಾಗಿದೆ.

ನಗರಪಾಲಿಕೆಯಿಂದ ಬೆಳಿಗ್ಗೆ ಅವರಿಗೆ ಪಲಾವ್ ನೀಡಲಾಗಿತ್ತು. ಇದು ಬೇಡ, ಚಪಾತಿ ಬೇಕೆಂದು ಪಟ್ಟು ಹಿಡಿದಿದ್ದರು. ನಮ್ಮನ್ನು ಬಿಟ್ಟುಬಿಡಿ ನಮ್ಮ ಊರಿಗೆ ಹೋಗುತ್ತೇವೆ ಎಂದು ದುಂಬಾಲು ಬಿದ್ದಿದ್ದರು. ಕೊರೊನಾ ವೈರಾಣು ಸೋಂಕು ಹರಡದಂತೆ ನೋಡಿಕೊಳ್ಳುವ ದೃಷ್ಟಿಯಿಂದ ಅವರನ್ನು ಇಲ್ಲಿಯೇ ಇರಿಸಲಾಗಿದೆ. ಲಾಕ್‌ಡೌನ್‌ ಕೂಡ ಇರುವುದರಿಂದ ಅವರನ್ನು ಕಳುಹಿಸಲಾಗಿಲ್ಲ ಎಂದು ಗೊತ್ತಾಗಿದೆ.

ಅವರಿಗೆ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ ಮಾಸ್ಕ್‌ಗಳನ್ನು ವಿತರಿಸಿದರು. ಮುಂಜಾಗ್ರತಾ ಕ್ರಮ ವಹಿಸುವಂತೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT