<p><strong>ಬೆಳಗಾವಿ:</strong> ‘ನಮ್ಮ ಹಿತದೃಷ್ಟಿಯಿಂದ ಪ್ರಯಾಣ ಬಾಡಿಗೆ ದರ ಪರಿಷ್ಕರಿಸಬೇಕು’ ಎಂದು ಆಗ್ರಹಿಸಿ ಆಟೊರಿಕ್ಷಾ ಓನರ್ಸ್ ಮತ್ತು ಡ್ರೈವರ್ಸ್ ಅಸೋಸಿಯೇಷನ್ನವರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.</p><p>ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ತಮ್ಮ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಮನವಿ ಸಲ್ಲಿಸಿದರು.</p><p>ಇಲ್ಲದಿದ್ದರೆ ಅನಿರ್ದಿಷ್ಟ ಅವಧಿಗೆ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಕೆ ಕೊಟ್ಟರು.</p><p>‘ಕನಿಷ್ಠ ಬಾಡಿಗೆ ದರವನ್ನು(1.5 ಕಿ.ಮಿನೊಳಗೆ) ₹50 ದರ ನಿಗದಿಪಡಿಸಬೇಕು. ನಂತರ ಪ್ರತಿ ಕಿ.ಮೀ ಪ್ರಯಾಣಕ್ಕೆ ₹30 ನಿಗದಿಪಡಿಸಬೇಕು. ಇದು ದುಬಾರಿ ಯುಗ. ಡೀಸೆಲ್ ಸೇರಿ ಅಗತ್ಯವಸ್ತುಗಳ ದರ ಹೆಚ್ಚಿದ್ದು, ಜೀವನ ನಿರ್ವಹಣೆ ಕಷ್ಟಕರವಾಗಿದೆ. ಹಾಗಾಗಿ ನಮ್ಮ ಬೇಡಿಕೆಯಂತೆ ಪ್ರಯಾಣ ಬಾಡಿಗೆ ದರ ನಿಗದಿಪಡಿಸಬೇಕು. ನಮ್ಮನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಯಾವುದೇ ನಿರ್ಣಯ ಕೈಗೊಳ್ಳಬೇಕು’ ಎಂದು ಅಸೋಸಿಯೇಷನ್ ಅಧ್ಯಕ್ಷ ಮನ್ಸೂರ್ ಒತ್ತಾಯಿಸಿದರು.</p><p>‘ಬೆಳಗಾವಿ ನಗರದಲ್ಲಿ ಅನಧಿಕೃತವಾಗಿ ಸಂಚರಿಸುತ್ತಿರುವ ಎಲೆಕ್ಟ್ರಿಕ್ ಆಟೊಗಳ ಸಂಚಾರ ಸ್ಥಗಿತಗೊಳಿಸಬೇಕು. ಬೆಳಗಾವಿ ನಗರದಿಂದ 16 ಕಿ.ಮೀ ವ್ಯಾಪ್ತಿಯಲ್ಲಿ ಆಟೊರಿಕ್ಷಾಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಆ ಮಿತಿಯನ್ನು 30 ಕಿ.ಮೀಗೆ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.</p><p>ಬಿ.ಕೆ.ಅವರೊಳ್ಳಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ನಮ್ಮ ಹಿತದೃಷ್ಟಿಯಿಂದ ಪ್ರಯಾಣ ಬಾಡಿಗೆ ದರ ಪರಿಷ್ಕರಿಸಬೇಕು’ ಎಂದು ಆಗ್ರಹಿಸಿ ಆಟೊರಿಕ್ಷಾ ಓನರ್ಸ್ ಮತ್ತು ಡ್ರೈವರ್ಸ್ ಅಸೋಸಿಯೇಷನ್ನವರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.</p><p>ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ತಮ್ಮ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಮನವಿ ಸಲ್ಲಿಸಿದರು.</p><p>ಇಲ್ಲದಿದ್ದರೆ ಅನಿರ್ದಿಷ್ಟ ಅವಧಿಗೆ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಕೆ ಕೊಟ್ಟರು.</p><p>‘ಕನಿಷ್ಠ ಬಾಡಿಗೆ ದರವನ್ನು(1.5 ಕಿ.ಮಿನೊಳಗೆ) ₹50 ದರ ನಿಗದಿಪಡಿಸಬೇಕು. ನಂತರ ಪ್ರತಿ ಕಿ.ಮೀ ಪ್ರಯಾಣಕ್ಕೆ ₹30 ನಿಗದಿಪಡಿಸಬೇಕು. ಇದು ದುಬಾರಿ ಯುಗ. ಡೀಸೆಲ್ ಸೇರಿ ಅಗತ್ಯವಸ್ತುಗಳ ದರ ಹೆಚ್ಚಿದ್ದು, ಜೀವನ ನಿರ್ವಹಣೆ ಕಷ್ಟಕರವಾಗಿದೆ. ಹಾಗಾಗಿ ನಮ್ಮ ಬೇಡಿಕೆಯಂತೆ ಪ್ರಯಾಣ ಬಾಡಿಗೆ ದರ ನಿಗದಿಪಡಿಸಬೇಕು. ನಮ್ಮನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಯಾವುದೇ ನಿರ್ಣಯ ಕೈಗೊಳ್ಳಬೇಕು’ ಎಂದು ಅಸೋಸಿಯೇಷನ್ ಅಧ್ಯಕ್ಷ ಮನ್ಸೂರ್ ಒತ್ತಾಯಿಸಿದರು.</p><p>‘ಬೆಳಗಾವಿ ನಗರದಲ್ಲಿ ಅನಧಿಕೃತವಾಗಿ ಸಂಚರಿಸುತ್ತಿರುವ ಎಲೆಕ್ಟ್ರಿಕ್ ಆಟೊಗಳ ಸಂಚಾರ ಸ್ಥಗಿತಗೊಳಿಸಬೇಕು. ಬೆಳಗಾವಿ ನಗರದಿಂದ 16 ಕಿ.ಮೀ ವ್ಯಾಪ್ತಿಯಲ್ಲಿ ಆಟೊರಿಕ್ಷಾಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಆ ಮಿತಿಯನ್ನು 30 ಕಿ.ಮೀಗೆ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.</p><p>ಬಿ.ಕೆ.ಅವರೊಳ್ಳಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>