ಎಂಇಎಸ್ ಉಪಟಳದ ಮಧ್ಯೆಯೂ ಗಡಿ ಜಿಲ್ಲೆಯಲ್ಲಿ ಕನ್ನಡಪರ ಹೋರಾಟವನ್ನು ಜೀವಂತವಾಗಿ ಇಟ್ಟವರಲ್ಲಿ ಅಶೋಕ ಚಂದರಗಿ ಕೂಡ ಒಬ್ಬರು. ಕನ್ನಡ ಸಾಹಿತ್ಯ, ಸಂಘಟನೆ, ಪತ್ರಿಕೋದ್ಯಮ, ಚಳವಳಿ ಹೀಗೆ ವೈವಿಧ್ಯಮಯ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿದ್ದಾರೆ. ಕರ್ನಾಟಕ ಗಡಿ ರಕ್ಷಣೆ ಹೋರಾಟ, ಕಳಸಾ– ಬಂಡೂರಿ ನಾಲಾ ಯೋಜನೆಗಾಗಿ ಮಾಡಿದ ಚಳವಳಿ ಸೇರಿದಂತೆ ನಾಲ್ಕು ದಶಕಗಳಿಂದ ಅವರ ಹೋರಾಟದ ಬದುಕನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.