<p><strong>ಚಿಕ್ಕೋಡಿ</strong>: ‘ಶಿಕ್ಷಕರು ಮಕ್ಕಳಿಗೆ ಗುರಿಯ ಬಗ್ಗೆ ಹೇಳಿಕೊಡಬೇಕು. ಮಕ್ಕಳಲ್ಲಿ ಏಕಾಗ್ರತೆ ಮೂಡಿಸಬೇಕು, ನಗು ನಗುತ್ತ ಪಾಠ ಮಾಡಬೇಕು’ ಎಂದು ರಾಜ್ಯ ಮಟ್ಟದ ಉತ್ತಮ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಪದ್ಮಶ್ರೀ ರೂಗೆ ಸಲಹೆ ನೀಡಿದರು.</p>.<p>ಪಟ್ಟಣದ ಆರ್.ಡಿ ಹೈಸ್ಕೂಲ್ನ ಧೋಂಡಿರಾಜ್ ಸಭಾ ಭವನದಲ್ಲಿ ರೋಟರಿ ಕ್ಲಬ್ ಸಹಯೋಗದಲ್ಲಿ ಶನಿವಾರ ‘ರಾಷ್ಟ್ರ ನಿರ್ಮಾಣ ಪ್ರಶಸ್ತಿ’ಯನ್ನು ಶಿಕ್ಷಕರಿಗೆ ವಿತರಿಸಿ ಅವರು ಮಾತನಾಡಿದರು.</p>.<p>ಶಿಕ್ಷಕ ಉಮೇಶ ತೋಟದ ಮಾತನಾಡಿ, ‘ಶಿಕ್ಷಕರನ್ನು ಮಕ್ಕಳು ಅನುಕರಣೆ ಮಾಡುತ್ತಾರೆ. ಹೀಗಾಗಿ ಶಿಕ್ಷಕರು ಎಚ್ಚರಿಕೆಯಿಂದ ಪಾಠ ಮಾಡಬೇಕು’ ಎಂದು ಹೇಳಿದರು.</p>.<p>ವಿವಿಧ ಶಾಲೆಗಳಲ್ಲಿ ಎಲೆ ಮರೆಯ ಕಾಯಿಯಂತೆ ಸೇವೆ ಸಲ್ಲಿಸಿದ 13 ಶಿಕ್ಷಕರಿಗೆ ರೋಟರಿ ಕ್ಲಬ್ನಿಂದ ‘ರಾಷ್ಟ್ರ ನಿರ್ಮಾಣ ಪ್ರಶಸ್ತಿ’ ಪ್ರದಾನ ಮಾಡಲಾಯಿತು.</p>.<p>ಚಿಕ್ಕೋಡಿ ರೋಟರಿ ಕ್ಲಬ್ ಅಧ್ಯಕ್ಷ ಶಿರಿಶ್ ಮೇಹತಾ, ಕಾರ್ಯದರ್ಶಿ ಶ್ರೀಧರ ಗಜ್ಜನ್ನವರ, ಅರುಣ ಮಾಳಿ, ರಾಜ್ ಜಾಧವ, ಜಯಶ್ರೀ ಕುಲಕರ್ಣಿ, ಸಂಕೇತ ಮಾಂಜರೇಕರ, ಆನಂದ ಅರವಾರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ</strong>: ‘ಶಿಕ್ಷಕರು ಮಕ್ಕಳಿಗೆ ಗುರಿಯ ಬಗ್ಗೆ ಹೇಳಿಕೊಡಬೇಕು. ಮಕ್ಕಳಲ್ಲಿ ಏಕಾಗ್ರತೆ ಮೂಡಿಸಬೇಕು, ನಗು ನಗುತ್ತ ಪಾಠ ಮಾಡಬೇಕು’ ಎಂದು ರಾಜ್ಯ ಮಟ್ಟದ ಉತ್ತಮ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಪದ್ಮಶ್ರೀ ರೂಗೆ ಸಲಹೆ ನೀಡಿದರು.</p>.<p>ಪಟ್ಟಣದ ಆರ್.ಡಿ ಹೈಸ್ಕೂಲ್ನ ಧೋಂಡಿರಾಜ್ ಸಭಾ ಭವನದಲ್ಲಿ ರೋಟರಿ ಕ್ಲಬ್ ಸಹಯೋಗದಲ್ಲಿ ಶನಿವಾರ ‘ರಾಷ್ಟ್ರ ನಿರ್ಮಾಣ ಪ್ರಶಸ್ತಿ’ಯನ್ನು ಶಿಕ್ಷಕರಿಗೆ ವಿತರಿಸಿ ಅವರು ಮಾತನಾಡಿದರು.</p>.<p>ಶಿಕ್ಷಕ ಉಮೇಶ ತೋಟದ ಮಾತನಾಡಿ, ‘ಶಿಕ್ಷಕರನ್ನು ಮಕ್ಕಳು ಅನುಕರಣೆ ಮಾಡುತ್ತಾರೆ. ಹೀಗಾಗಿ ಶಿಕ್ಷಕರು ಎಚ್ಚರಿಕೆಯಿಂದ ಪಾಠ ಮಾಡಬೇಕು’ ಎಂದು ಹೇಳಿದರು.</p>.<p>ವಿವಿಧ ಶಾಲೆಗಳಲ್ಲಿ ಎಲೆ ಮರೆಯ ಕಾಯಿಯಂತೆ ಸೇವೆ ಸಲ್ಲಿಸಿದ 13 ಶಿಕ್ಷಕರಿಗೆ ರೋಟರಿ ಕ್ಲಬ್ನಿಂದ ‘ರಾಷ್ಟ್ರ ನಿರ್ಮಾಣ ಪ್ರಶಸ್ತಿ’ ಪ್ರದಾನ ಮಾಡಲಾಯಿತು.</p>.<p>ಚಿಕ್ಕೋಡಿ ರೋಟರಿ ಕ್ಲಬ್ ಅಧ್ಯಕ್ಷ ಶಿರಿಶ್ ಮೇಹತಾ, ಕಾರ್ಯದರ್ಶಿ ಶ್ರೀಧರ ಗಜ್ಜನ್ನವರ, ಅರುಣ ಮಾಳಿ, ರಾಜ್ ಜಾಧವ, ಜಯಶ್ರೀ ಕುಲಕರ್ಣಿ, ಸಂಕೇತ ಮಾಂಜರೇಕರ, ಆನಂದ ಅರವಾರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>