ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರೊ.ರಾಖಿ ಕಳ್ಳಿಮನಿ ಅವರ ಮಾರ್ಗದರ್ಶನದಲ್ಲಿ ಕೃಷ್ಣಾ ಪೈ, ವಿನಾಯಕ, ಜಯವಂತ, ಪ್ರಾಚಿ ಪಾಟೀಲ, ಮಾನಸಿ ಕುಡಚಿ ಯೋಜನೆ ಸಿದ್ಧಪಡಿಸಿದ್ದರು. ರಸ್ತೆ ಅಪಘಾತಗಳನ್ನು ತಡೆಗಟ್ಟಲು ವಾಹನ ಸವಾರರಿಗೆ ಸಂದೇಶ ರವಾನಿಸುವ ತಂತ್ರಜ್ಞಾನವನ್ನು ಇದು ಒಳಗೊಂಡಿದೆ. ವಿದ್ಯಾರ್ಥಿಗಳನ್ನು ಪ್ರಾಚಾರ್ಯ ಡಾ.ಬಸವರಾಜ ಕಟಗೇರಿ, ವಿಭಾಗದ ಮುಖ್ಯಸ್ಥ ಪ್ರೊ.ಅರುಣ ಶಿರಾಳಕರ ಹಾಗೂ ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.