<p><strong>ಅಥಣಿ: </strong>‘ಪ್ರಸ್ತುತ ಪ್ರಶಸ್ತಿಗಳು ಪ್ರಾಮಾಣಿಕ ಮತ್ತು ಪ್ರತಿಭಾವಂತರನ್ನು ಹುಡುಕಿಕೊಂಡು ಬರುವುದಿಲ್ಲ. ಪ್ರಾಮಾಣಿಕರೆ ದುಡ್ಡು ಕೊಟ್ಟು ಪ್ರಶಸ್ತಿಗಳನ್ನು ಕೊಂಡುಕೊಳ್ಳುವ ಪರಸ್ಥಿತಿ ಬಂದಿದೆ. ಅವುಗಳು ಕೂಡ ಸರಕುಗಳಂತೆ ಮಾರಾಟ ಆಗುತ್ತಿರುವುದು ವಿಪರ್ಯಾಸ’ ಎಂದು ಸಾಹಿತಿ ಡಾ.ವಿ.ಎಸ್. ಮಾಳಿ ಹೇಳಿದರು.</p>.<p>ಸಮೀಪದ ಸಂಕೋನಟ್ಟಿ-ಚಿಕ್ಕಟ್ಟಿ ರಸ್ತೆಯಲ್ಲಿರುವ ನಂದೀಶ ತಪೋವನದಲ್ಲಿ ಭಾನುವಾರ ನಿವೃತ್ತ ಶಿಕ್ಷಕ ನಂದೆಪ್ಪ ಪರಪ್ಪ ಟೋಪಗಿ ಅವರ ದ್ವಿತೀಯ ಪುಣ್ಯಸ್ಮರಣೆ ಹಾಗೂ ಶಿವಾನುಭವ ಗೋಷ್ಠಿ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದಿಂದ ‘ಸಾಹಿತ್ಯಶ್ರೀ’ ಪ್ರಶಸ್ತಿ ದೊರೆತಿದ್ದಕ್ಕೆ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಇಂದಿನ ದಿನಗಳಲ್ಲಿ ಅಪಮೌಲ್ಯಗಳು ಮೌಲ್ಯಗಳಾಗುತ್ತಿವೆ. ಪ್ರತಿಯೊಬ್ಬರೂ ನಾಟಕದ ಪಾತ್ರಧಾರಿಗಳಂತೆ ಕಾರ್ಯನಿರ್ವಹಿಸುವ ಪರಿಸ್ಥಿತಿ ಬಂದಿದೆ’ ಎಂದು ವಿಷಾದಿಸಿದರು. ‘ಭ್ರಷ್ಟಾಚಾರವಿಲ್ಲದ ಸಮಾಜ ನಿರ್ಮಾಣವಾಗಬೇಕು’ ಎಂದು ಆಶಯ ವ್ಯಕ್ತಪಡಿಸಿದರು.</p>.<p>ನಂದಗಾಂವ ಭೂಕೈಲಾಸ ಮಂದಿರದ ಮಹಾದೇವ ಮಹಾರಾಜ, ‘ಲಿಂ.ನಂದೆಪ್ಪ ಟೋಪಗಿ ವೃತ್ತಿಯಿಂದ ಶಿಕ್ಷಕರಾಗಿದ್ದರೂ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿ ಹಲವರಿಗೆ ನೆರವಾಗಿದ್ದರು’ ಎಂದು ಸ್ಮರಿಸಿದರು.</p>.<p>ತಹಶೀಲ್ದಾರ್ ಹುದ್ದೆಗೆ ಆಯ್ಕೆಯಾದ ಸುರೇಶ ಮುಂಜೆ ಅವರನ್ನು ಗೌರವಿಸಲಾಯಿತು.</p>.<p>ಯಕ್ಕಂಚಿಯ ಗರುದೇವ ತಪೋವನದ ಗೋಪಾಲ ಮಹಾರಾಜ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ಎನ್.ಜಿ. ಪಾಟೀಲ ಇದ್ದರು.</p>.<p>ಶ್ರೀಲೇಖಾ ಟೋಪಗಿ ಪ್ರಾರ್ಥಿಸಿದರು. ಬಿ.ಜಿ. ಪಾಟೀಲ ಸ್ವಾಗತಿಸಿದರು. ವಿಜಯ ಹುದ್ದಾರ ನಿರೂಪಿಸಿದರು. ವಕೀಲ ಸುಭಾಸ ನಾಯಿಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ: </strong>‘ಪ್ರಸ್ತುತ ಪ್ರಶಸ್ತಿಗಳು ಪ್ರಾಮಾಣಿಕ ಮತ್ತು ಪ್ರತಿಭಾವಂತರನ್ನು ಹುಡುಕಿಕೊಂಡು ಬರುವುದಿಲ್ಲ. ಪ್ರಾಮಾಣಿಕರೆ ದುಡ್ಡು ಕೊಟ್ಟು ಪ್ರಶಸ್ತಿಗಳನ್ನು ಕೊಂಡುಕೊಳ್ಳುವ ಪರಸ್ಥಿತಿ ಬಂದಿದೆ. ಅವುಗಳು ಕೂಡ ಸರಕುಗಳಂತೆ ಮಾರಾಟ ಆಗುತ್ತಿರುವುದು ವಿಪರ್ಯಾಸ’ ಎಂದು ಸಾಹಿತಿ ಡಾ.ವಿ.ಎಸ್. ಮಾಳಿ ಹೇಳಿದರು.</p>.<p>ಸಮೀಪದ ಸಂಕೋನಟ್ಟಿ-ಚಿಕ್ಕಟ್ಟಿ ರಸ್ತೆಯಲ್ಲಿರುವ ನಂದೀಶ ತಪೋವನದಲ್ಲಿ ಭಾನುವಾರ ನಿವೃತ್ತ ಶಿಕ್ಷಕ ನಂದೆಪ್ಪ ಪರಪ್ಪ ಟೋಪಗಿ ಅವರ ದ್ವಿತೀಯ ಪುಣ್ಯಸ್ಮರಣೆ ಹಾಗೂ ಶಿವಾನುಭವ ಗೋಷ್ಠಿ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದಿಂದ ‘ಸಾಹಿತ್ಯಶ್ರೀ’ ಪ್ರಶಸ್ತಿ ದೊರೆತಿದ್ದಕ್ಕೆ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಇಂದಿನ ದಿನಗಳಲ್ಲಿ ಅಪಮೌಲ್ಯಗಳು ಮೌಲ್ಯಗಳಾಗುತ್ತಿವೆ. ಪ್ರತಿಯೊಬ್ಬರೂ ನಾಟಕದ ಪಾತ್ರಧಾರಿಗಳಂತೆ ಕಾರ್ಯನಿರ್ವಹಿಸುವ ಪರಿಸ್ಥಿತಿ ಬಂದಿದೆ’ ಎಂದು ವಿಷಾದಿಸಿದರು. ‘ಭ್ರಷ್ಟಾಚಾರವಿಲ್ಲದ ಸಮಾಜ ನಿರ್ಮಾಣವಾಗಬೇಕು’ ಎಂದು ಆಶಯ ವ್ಯಕ್ತಪಡಿಸಿದರು.</p>.<p>ನಂದಗಾಂವ ಭೂಕೈಲಾಸ ಮಂದಿರದ ಮಹಾದೇವ ಮಹಾರಾಜ, ‘ಲಿಂ.ನಂದೆಪ್ಪ ಟೋಪಗಿ ವೃತ್ತಿಯಿಂದ ಶಿಕ್ಷಕರಾಗಿದ್ದರೂ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿ ಹಲವರಿಗೆ ನೆರವಾಗಿದ್ದರು’ ಎಂದು ಸ್ಮರಿಸಿದರು.</p>.<p>ತಹಶೀಲ್ದಾರ್ ಹುದ್ದೆಗೆ ಆಯ್ಕೆಯಾದ ಸುರೇಶ ಮುಂಜೆ ಅವರನ್ನು ಗೌರವಿಸಲಾಯಿತು.</p>.<p>ಯಕ್ಕಂಚಿಯ ಗರುದೇವ ತಪೋವನದ ಗೋಪಾಲ ಮಹಾರಾಜ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ಎನ್.ಜಿ. ಪಾಟೀಲ ಇದ್ದರು.</p>.<p>ಶ್ರೀಲೇಖಾ ಟೋಪಗಿ ಪ್ರಾರ್ಥಿಸಿದರು. ಬಿ.ಜಿ. ಪಾಟೀಲ ಸ್ವಾಗತಿಸಿದರು. ವಿಜಯ ಹುದ್ದಾರ ನಿರೂಪಿಸಿದರು. ವಕೀಲ ಸುಭಾಸ ನಾಯಿಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>