<p><strong>ಬೆಳಗಾವಿ:</strong> ದೇಹದಾನ ಜಾಗೃತಿಗಾಗಿ ತಂದೆಯ ಮೃತದೇಹ ಛೇದನ ಮಾಡಿ ವೈದ್ಯಕೀಯ ಇತಿಹಾಸ ಸೃಷ್ಟಿಸಿದ ಕೆಎಲ್ಇ ಬಿ.ಎಂ.ಕಂಕಣವಾಡಿ ಆಯುರ್ವೆದ ಮಹಾವಿದ್ಯಾಲಯದ ಶರೀರ ರಚನಾ ವಿಭಾಗದ ಮುಖ್ಯಸ್ಥ, ಡಾ.ರಾಮಣ್ಣವರ ಚಾರಿಟಬಲ್ ಟ್ರಸ್ಟ್ನ ಕಾರ್ಯದರ್ಶಿ ಡಾ.ಮಹಾಂತೇಶ ಬಿ. ರಾಮಣ್ಣವರ ಅವರು ‘ಆಯುರ್ವೇದ ವಿಶ್ವರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.</p>.<p>ಕಜೆ ಆಯುರ್ವೇದಿಕ್ ಫೌಂಡೇಷನ್ ವತಿಯಿಂದ ಎರಡನೇ ವಿಶ್ವ ಆಯುರ್ವೇದ ಸಮ್ಮೇಳನ ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿ.25ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ದೇಶ ಹಾಗೂ ವಿದೇಶಗಳಿಂದ 400 ಆಯುರ್ವೇದ ವೈದ್ಯರಿಗೆ ಈ ಪ್ರಶಸ್ತಿಯನ್ನು ನೀಡಲಾಗುವುದು. ಅದರಲ್ಲಿ ಡಾ.ರಾಮಣ್ಣವರ ಕೂಡ ಒಬ್ಬರು. ದೇಹದಾನದ ಬಗ್ಗೆ ನಿರಂತರ ಜಾಗೃತಿ, ಅರಿವು ಮೂಡಿಸಿದ ಅವರ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ವಿಶ್ವ ಆಯುರ್ವೇದ ಸಮ್ಮೇಳನದ ಆಯೋಜಕರಾದ ಡಾ.ಗಿರಿಧರ್ ಕಜೆ, ಕಾಲೇಜಿನ ಪ್ರಾಂಶುಪಾಲ ಡಾ.ಸುಹಾಸ ಕುಮಾರ ಶೆಟ್ಟಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ದೇಹದಾನ ಜಾಗೃತಿಗಾಗಿ ತಂದೆಯ ಮೃತದೇಹ ಛೇದನ ಮಾಡಿ ವೈದ್ಯಕೀಯ ಇತಿಹಾಸ ಸೃಷ್ಟಿಸಿದ ಕೆಎಲ್ಇ ಬಿ.ಎಂ.ಕಂಕಣವಾಡಿ ಆಯುರ್ವೆದ ಮಹಾವಿದ್ಯಾಲಯದ ಶರೀರ ರಚನಾ ವಿಭಾಗದ ಮುಖ್ಯಸ್ಥ, ಡಾ.ರಾಮಣ್ಣವರ ಚಾರಿಟಬಲ್ ಟ್ರಸ್ಟ್ನ ಕಾರ್ಯದರ್ಶಿ ಡಾ.ಮಹಾಂತೇಶ ಬಿ. ರಾಮಣ್ಣವರ ಅವರು ‘ಆಯುರ್ವೇದ ವಿಶ್ವರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.</p>.<p>ಕಜೆ ಆಯುರ್ವೇದಿಕ್ ಫೌಂಡೇಷನ್ ವತಿಯಿಂದ ಎರಡನೇ ವಿಶ್ವ ಆಯುರ್ವೇದ ಸಮ್ಮೇಳನ ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿ.25ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ದೇಶ ಹಾಗೂ ವಿದೇಶಗಳಿಂದ 400 ಆಯುರ್ವೇದ ವೈದ್ಯರಿಗೆ ಈ ಪ್ರಶಸ್ತಿಯನ್ನು ನೀಡಲಾಗುವುದು. ಅದರಲ್ಲಿ ಡಾ.ರಾಮಣ್ಣವರ ಕೂಡ ಒಬ್ಬರು. ದೇಹದಾನದ ಬಗ್ಗೆ ನಿರಂತರ ಜಾಗೃತಿ, ಅರಿವು ಮೂಡಿಸಿದ ಅವರ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ವಿಶ್ವ ಆಯುರ್ವೇದ ಸಮ್ಮೇಳನದ ಆಯೋಜಕರಾದ ಡಾ.ಗಿರಿಧರ್ ಕಜೆ, ಕಾಲೇಜಿನ ಪ್ರಾಂಶುಪಾಲ ಡಾ.ಸುಹಾಸ ಕುಮಾರ ಶೆಟ್ಟಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>