<p><strong>ಹುಕ್ಕೇರಿ:</strong> ‘ತಾಲ್ಲೂಕಿನ 57 ಗ್ರಾಮಗಳ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ಮತ್ತು ಮನೆ ಕಟ್ಟಿಕೊಂಡಿರುವ ಜನರಿಗೆ ನ್ಯಾಯ ಒದಗಿಸಲು ಶ್ರಮಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.</p>.<p>ಇಲ್ಲಿನ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಆವರಣದಲ್ಲಿ ಬುಧವಾರ ನಡೆದ ಬಗರ್ಹುಕುಂ ಸಮಿತಿ ಸದಸ್ಯರು ಮತ್ತು ಸಾರ್ವಜನಿಕರ ಅಹವಾಲು ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಸಮಿತಿಯಿಂದ ಈವರೆಗೆ ಒಬ್ಬರಿಗೂ ಹಕ್ಕುಪತ್ರ ವಿತರಿಸಿಲ್ಲ. 1,500ಕ್ಕೂ ಅಧಿಕ ಅರ್ಜಿ ಬಂದಿದ್ದು, ತಾಂತ್ರಿಕ ಕಾರಣಗಳಿಂದ ಸರ್ಕಾರದ ಮಟ್ಟದಲ್ಲಿ ತಿರಸ್ಕೃತಗೊಂಡಿವೆ. ಸಭೆ ಮೂಲಕ ಇದನ್ನು ಮತ್ತೊಮ್ಮೆ ಪರಿಶೀಲಿಸಿ, ಅವರಿಗೆ ನ್ಯಾಯ ಒದಗಿಸಲಾಗುವುದು’ ಎಂದರು.</p>.<p>‘ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರ ಬಡವರ ಪರವಾಗಿದೆ. ನಿಮ್ಮ ಬೇಡಿಕೆ ಈಡೇರಿಸಲು ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.</p>.<p>ಪುರಸಭೆ ಅಧ್ಯಕ್ಷ ಇಮ್ರಾನ್ ಮೋಮಿನ್, ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ ಜಯಗೌಡ ಪಾಟೀಲ, ಬಗರ್ಹುಕುಂ ಸಮಿತಿ ಸದಸ್ಯರಾದ ಕೆಂಪಣ್ಣ ಶಿರಹಟ್ಟಿ, ದ್ರಾಕ್ಷಾಯಿಣಿ ಏಶಿ, ಸದಾನಂದ ಗುಡಿಕಡೆ, ಸಿಕಂದರ್ ಸನದಿ, ಭಾರತಿ ಬೆಣ್ಣಿ, ಶರದ ಪಾಟೀಲ, ತಹಶೀಲ್ದಾರ್ ಮಂಜುಳಾ ನಾಯಕ, ಗ್ರೇಡ್-2 ತಹಶೀಲ್ದಾರ್ ಪ್ರಕಾಶ ಕಲ್ಲೋಳಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್.ಮಲ್ಲಾಡದ, ತನ್ವೀನ್ ಡಾಂಗೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ:</strong> ‘ತಾಲ್ಲೂಕಿನ 57 ಗ್ರಾಮಗಳ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ಮತ್ತು ಮನೆ ಕಟ್ಟಿಕೊಂಡಿರುವ ಜನರಿಗೆ ನ್ಯಾಯ ಒದಗಿಸಲು ಶ್ರಮಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.</p>.<p>ಇಲ್ಲಿನ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಆವರಣದಲ್ಲಿ ಬುಧವಾರ ನಡೆದ ಬಗರ್ಹುಕುಂ ಸಮಿತಿ ಸದಸ್ಯರು ಮತ್ತು ಸಾರ್ವಜನಿಕರ ಅಹವಾಲು ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಸಮಿತಿಯಿಂದ ಈವರೆಗೆ ಒಬ್ಬರಿಗೂ ಹಕ್ಕುಪತ್ರ ವಿತರಿಸಿಲ್ಲ. 1,500ಕ್ಕೂ ಅಧಿಕ ಅರ್ಜಿ ಬಂದಿದ್ದು, ತಾಂತ್ರಿಕ ಕಾರಣಗಳಿಂದ ಸರ್ಕಾರದ ಮಟ್ಟದಲ್ಲಿ ತಿರಸ್ಕೃತಗೊಂಡಿವೆ. ಸಭೆ ಮೂಲಕ ಇದನ್ನು ಮತ್ತೊಮ್ಮೆ ಪರಿಶೀಲಿಸಿ, ಅವರಿಗೆ ನ್ಯಾಯ ಒದಗಿಸಲಾಗುವುದು’ ಎಂದರು.</p>.<p>‘ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರ ಬಡವರ ಪರವಾಗಿದೆ. ನಿಮ್ಮ ಬೇಡಿಕೆ ಈಡೇರಿಸಲು ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.</p>.<p>ಪುರಸಭೆ ಅಧ್ಯಕ್ಷ ಇಮ್ರಾನ್ ಮೋಮಿನ್, ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ ಜಯಗೌಡ ಪಾಟೀಲ, ಬಗರ್ಹುಕುಂ ಸಮಿತಿ ಸದಸ್ಯರಾದ ಕೆಂಪಣ್ಣ ಶಿರಹಟ್ಟಿ, ದ್ರಾಕ್ಷಾಯಿಣಿ ಏಶಿ, ಸದಾನಂದ ಗುಡಿಕಡೆ, ಸಿಕಂದರ್ ಸನದಿ, ಭಾರತಿ ಬೆಣ್ಣಿ, ಶರದ ಪಾಟೀಲ, ತಹಶೀಲ್ದಾರ್ ಮಂಜುಳಾ ನಾಯಕ, ಗ್ರೇಡ್-2 ತಹಶೀಲ್ದಾರ್ ಪ್ರಕಾಶ ಕಲ್ಲೋಳಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್.ಮಲ್ಲಾಡದ, ತನ್ವೀನ್ ಡಾಂಗೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>