<p><strong>ಬೈಲಹೊಂಗಲ (ಬೆಳಗಾವಿ ಜಿಲ್ಲೆ): </strong>ಪ್ರತಿಬಾರಿಯಂತೆ ಈ ವರ್ಷವೂ ಪಟ್ಟಣದ ದರ್ಗಾದಲ್ಲಿ ಹಿಂದೂ ಮುಸ್ಲಿಮರು ಸೇರಿಕೊಂಡು ವಿಘ್ನನಿವಾರಕನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.</p>.<p>ಪಟ್ಟಣದ ಕಂಠಿ ಗಲ್ಲಿಯಲ್ಲಿರುವ ಆಲಕಟ್ಟಿ ಫಕ್ಕೀರಸ್ವಾಮಿ ದರ್ಗಾ ಕೋಮು ಸೌಹಾರ್ದಕ್ಕೆ ಸಾಕ್ಷಿಯಾಗಿ ನಿಂತಿದೆ.</p>.<p>ಸಂಪ್ರದಾಯದಂತೆ ಬುಧವಾರ ಗಣಪನ ಮೂರ್ತಿಯನ್ನು ಹಿಂದೂ ಮುಸ್ಲಿಮ್ ಯುವಕರು ಮೆರವಣಿಗೆ ಮೂಲಕ ತಂದು ದರ್ಗಾದಲ್ಲಿ ಪ್ರತಿಸ್ಥಾಪನೆ ಮಾಡಿದರು. </p>.<p>ಮುಸ್ಲಿಮರು ಗಣಪನಿಗೆ ಹೂವು ಮಾಲೆ ಹಾಕಿ, ಕಾಯಿ, ಕರ್ಪೂರ ಬೆಳಗಿದರು, ಹಿಂದೂಗಳು ಆರತಿ ಮಾಡಿ, ನೈವೇದ್ಯ ಸಲ್ಲಿಸಿದರು.</p>.<p>ಅರ್ಚಕರು ಬೋಧಿಸಿದ ಮಂತ್ರ ಘೋಷವನ್ನು ಮುಸ್ಲಿಂ ಯುವಕರು ಭಕ್ತಿಯಿಂದ ಹೇಳಿ ಸಂಭ್ರಮಿಸಿದರು, ಗಜಾನನ ಮಹರಾಜಕೀ ಜೈ ಎಂದು ಘೋಷಣೆ ಹಾಕಿದರು.</p>.<p><strong>ಸ್ವಾತಂತ್ರ್ಯ ಪೂರ್ವದ ಪದ್ಧತಿ:</strong>ಕೋಮು ಸೌಹಾರ್ದಕ್ಕೆ ಹೆಸರಾಗಿರುವ ಬೈಲಹೊಂಗಲ ಪಟ್ಟಣದಲ್ಲಿ ಹಿಂದೂ, ಮುಸ್ಲಿಮರು ಒಟ್ಟಿಗೆ ಸೇರಿ ವಿಘ್ನನಿವಾರಕಗಣಪನ ಮೂರ್ತಿ ಪ್ರತಿಷ್ಠಾಪಿಸುವುದು ಇಂದು ನಿನ್ನೆಯ ಕತೆಯಲ್ಲ.</p>.<p>ಸ್ವಾತಂತ್ರ್ಯಪೂರ್ವ ಕಾಲದಿಂದಲೂ ಕಂಠಿ ಗಲ್ಲಿಯಲ್ಲಿರುವ ನಿವಾಸಿಗಳು ಪ್ರತಿ ವರ್ಷ ಎಲ್ಲ ಹಬ್ಬವನ್ನು ಒಂದಾಗಿ ಆಚರಿಸುತ್ತ ಬಂದಿದ್ದಾರೆ.</p>.<p>ಹಿಂದೂಗಳು ಮೊಹರಂ ಆಚರಣೆ ಮಾಡುವ ಮೂಲಕ ಭಾವೈಕ್ಯದ ಹೆಜ್ಜೆ ಇಡುತ್ತ ಬಂದಿದ್ದಾರೆ. ಮುಸ್ಲಿಮರು ಅದಕ್ಕೂ ಒಂದು ಹೆಜ್ಜೆ ಮುಂದೆ ಬಂದು ದರ್ಗಾದೊಳಗೇ ಗಣೇಶನ ಮೂರ್ತಿ ಪೂಜಿಸಿ ಚತುರ್ಥಿಯನ್ನು ಅಷ್ಟೇ ನಯ, ವಿನಯ, ಭಕ್ತಿಭಾವದಿಂದ ಆಚರಿಸುತ್ತಾರೆ.</p>.<p>ಮೂರ್ತಿ ವಿಸರ್ಜನೆ ದಿನವೂ ಒಟ್ಟಿಗೆ ಮೆರವಣಿಗೆ ಮೂಲಕ ತೆರಳುವುದು ಇನ್ನೊಂದು ವಿಶೇಷ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಲಹೊಂಗಲ (ಬೆಳಗಾವಿ ಜಿಲ್ಲೆ): </strong>ಪ್ರತಿಬಾರಿಯಂತೆ ಈ ವರ್ಷವೂ ಪಟ್ಟಣದ ದರ್ಗಾದಲ್ಲಿ ಹಿಂದೂ ಮುಸ್ಲಿಮರು ಸೇರಿಕೊಂಡು ವಿಘ್ನನಿವಾರಕನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.</p>.<p>ಪಟ್ಟಣದ ಕಂಠಿ ಗಲ್ಲಿಯಲ್ಲಿರುವ ಆಲಕಟ್ಟಿ ಫಕ್ಕೀರಸ್ವಾಮಿ ದರ್ಗಾ ಕೋಮು ಸೌಹಾರ್ದಕ್ಕೆ ಸಾಕ್ಷಿಯಾಗಿ ನಿಂತಿದೆ.</p>.<p>ಸಂಪ್ರದಾಯದಂತೆ ಬುಧವಾರ ಗಣಪನ ಮೂರ್ತಿಯನ್ನು ಹಿಂದೂ ಮುಸ್ಲಿಮ್ ಯುವಕರು ಮೆರವಣಿಗೆ ಮೂಲಕ ತಂದು ದರ್ಗಾದಲ್ಲಿ ಪ್ರತಿಸ್ಥಾಪನೆ ಮಾಡಿದರು. </p>.<p>ಮುಸ್ಲಿಮರು ಗಣಪನಿಗೆ ಹೂವು ಮಾಲೆ ಹಾಕಿ, ಕಾಯಿ, ಕರ್ಪೂರ ಬೆಳಗಿದರು, ಹಿಂದೂಗಳು ಆರತಿ ಮಾಡಿ, ನೈವೇದ್ಯ ಸಲ್ಲಿಸಿದರು.</p>.<p>ಅರ್ಚಕರು ಬೋಧಿಸಿದ ಮಂತ್ರ ಘೋಷವನ್ನು ಮುಸ್ಲಿಂ ಯುವಕರು ಭಕ್ತಿಯಿಂದ ಹೇಳಿ ಸಂಭ್ರಮಿಸಿದರು, ಗಜಾನನ ಮಹರಾಜಕೀ ಜೈ ಎಂದು ಘೋಷಣೆ ಹಾಕಿದರು.</p>.<p><strong>ಸ್ವಾತಂತ್ರ್ಯ ಪೂರ್ವದ ಪದ್ಧತಿ:</strong>ಕೋಮು ಸೌಹಾರ್ದಕ್ಕೆ ಹೆಸರಾಗಿರುವ ಬೈಲಹೊಂಗಲ ಪಟ್ಟಣದಲ್ಲಿ ಹಿಂದೂ, ಮುಸ್ಲಿಮರು ಒಟ್ಟಿಗೆ ಸೇರಿ ವಿಘ್ನನಿವಾರಕಗಣಪನ ಮೂರ್ತಿ ಪ್ರತಿಷ್ಠಾಪಿಸುವುದು ಇಂದು ನಿನ್ನೆಯ ಕತೆಯಲ್ಲ.</p>.<p>ಸ್ವಾತಂತ್ರ್ಯಪೂರ್ವ ಕಾಲದಿಂದಲೂ ಕಂಠಿ ಗಲ್ಲಿಯಲ್ಲಿರುವ ನಿವಾಸಿಗಳು ಪ್ರತಿ ವರ್ಷ ಎಲ್ಲ ಹಬ್ಬವನ್ನು ಒಂದಾಗಿ ಆಚರಿಸುತ್ತ ಬಂದಿದ್ದಾರೆ.</p>.<p>ಹಿಂದೂಗಳು ಮೊಹರಂ ಆಚರಣೆ ಮಾಡುವ ಮೂಲಕ ಭಾವೈಕ್ಯದ ಹೆಜ್ಜೆ ಇಡುತ್ತ ಬಂದಿದ್ದಾರೆ. ಮುಸ್ಲಿಮರು ಅದಕ್ಕೂ ಒಂದು ಹೆಜ್ಜೆ ಮುಂದೆ ಬಂದು ದರ್ಗಾದೊಳಗೇ ಗಣೇಶನ ಮೂರ್ತಿ ಪೂಜಿಸಿ ಚತುರ್ಥಿಯನ್ನು ಅಷ್ಟೇ ನಯ, ವಿನಯ, ಭಕ್ತಿಭಾವದಿಂದ ಆಚರಿಸುತ್ತಾರೆ.</p>.<p>ಮೂರ್ತಿ ವಿಸರ್ಜನೆ ದಿನವೂ ಒಟ್ಟಿಗೆ ಮೆರವಣಿಗೆ ಮೂಲಕ ತೆರಳುವುದು ಇನ್ನೊಂದು ವಿಶೇಷ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>