<p><strong>ಬೈಲಹೊಂಗಲ:</strong> ರೈತರ ಪ್ರತಿ ಟನ್ ಕಬ್ಬಿಗೆ ₹3,500 ದರ ನೀಡುವಂತೆ ಒತ್ತಾಯಿಸಿ ವಿವಿಧ ರೈತಪರ ಸಂಘಟನೆಗಳು, ಕಬ್ಬು ಬೆಳೆಗಾರರು, ಸಂಘ, ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು ನೀಡಿದ ಬೈಲಹೊಂಗಲ ಬಂದ್ ಕರೆ ಶನಿವಾರ ಸಂಪೂರ್ಣ ಯಶಸ್ವಿ ಆಯಿತು.</p>.<p>ಬಂದ್ ಇದ್ದರೂ ಬೆಳಿಗ್ಗೆ ಅಲ್ಲಲ್ಲಿ ಅಂಗಡಿಗಳನ್ನು ಅರ್ಧ ಭಾಗ ತೆರೆದು ವ್ಯಾಪಾರ ಮಾಡುತ್ತಿದ್ದ ಅಂಗಡಿಗಳ ಮೇಲೆ, ರಸ್ತೆಗಿಳಿದ ಬಸ್ಗಳ ಮೇಲೆ, ಹೊಸೂರ ರಸ್ತೆಯ ಇನಾಮದಾರ ಶುಗರ್ಸ್ ಫ್ಯಾಕ್ಟರಿ ಕಚೇರಿ ಮೇಲೆ ಹೋರಾಟಗಾರರು ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಬೈಲಹೊಂಗಲ ಪಟ್ಟಣದೆಲ್ಲೆಡೆ ಹೋರಾಟಗಾರರು ಎರಡು ಬಾರಿ ಬೈಕ್ ರ್ಯಾಲಿ ನಡೆಸಿ ಅಲ್ಲಲ್ಲಿ ಬೀದಿ ಬದಿಯ ವ್ಯಾಪಾರಸ್ಥರು, ಗೂಡಂಗಡಿಗಳನ್ನು ಬಂದ್ ಮಾಡಿಸಿದರು.</p>.<p>ಧಾರವಾಡ ಬೈಪಾಸ್ ರಸ್ತೆ ಮೂಲಕ ಸಾಗುತ್ತಿದ್ದ ಬಸ್ ಮೇಲೆ, ಬೆಳಗಾವಿ ರಸ್ತೆಯ ಹೊರವಲಯದಲ್ಲಿ ಬೆಳಗಾವಿ, ಬೈಲಹೊಂಗಲ ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಿದರು.</p>.<p>ಸೋಮವಾರ ಪೇಟೆ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರ ಅಂಗಡಿಗಳನ್ನು ಒತ್ತಾಯದಿಂದ ಮುಚ್ಚಿಸಲಾಯಿತು. ಬಜಾರ ರಸ್ತೆ, ಬಸ್ ನಿಲ್ದಾಣ, ಬೆಲ್ಲದ ಕೂಟ, ಎಪಿಎಂಸಿ, ಇಂಚಲ ಕ್ರಾಸ್ ಎಲ್ಲ ಅಂಗಡಿಗಳು, ಬಾರ್, ರೆಸ್ಟೋರೆಂಟ್, ಹೊಟೇಲ್ಗಳನ್ನು ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.</p>.<p>ಮಧ್ಯಾಹ್ನ ಬಸ್, ಖಾಸಗಿ ವಾಹನಗಳ ಓಡಾಟ ಸಂಪೂರ್ಣ ಬಂದ್ ಆಗಿತ್ತು. ಚಿತ್ರ ಮಂದಿರ, ಪೆಟ್ರೋಲ್ ಬಂಕ್, ಶಾಲೆ, ಕಾಲೇಜು ಬಂದ್ ಆಗಿದ್ದವು.</p>.<p>ಡಿವೈಎಸ್ಪಿ ವೀರಯ್ಯ ಹಿರೇಮಠ ಮಾರ್ಗದರ್ಶನದಲ್ಲಿ ಸಿಪಿಐ ಪ್ರಮೋದ ಯಲಿಗಾರ ಬಿಗಿ ಪೊಲೀಸ್ ಬಂದು ಬಸ್ತ್ ಒದಗಿಸಿದ್ದರು.</p>.<p>ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ವಕೀಲ ಶ್ರೀಶೈಲ ಬೋಳನ್ನವರ, ಹೋರಾಟಗಾರರಾದ ಶಂಕರ ಮಾಡಲಗಿ, ಮಹಾಂತೇಶ ಕಮತ, ಮಲ್ಲಿಕಾರ್ಜುನ ಹುಂಬಿ, ಶಂಕರ ಬೋಳನ್ನವರ, ಎಫ್.ಎಸ್.ಸಿದ್ದನಗೌಡರ, ಪ್ರಮೋದಕುಮಾರ ವಕ್ಕುಂದಮಠ, ಸುರೇಶ ವಾಲಿ, ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಲಹೊಂಗಲ:</strong> ರೈತರ ಪ್ರತಿ ಟನ್ ಕಬ್ಬಿಗೆ ₹3,500 ದರ ನೀಡುವಂತೆ ಒತ್ತಾಯಿಸಿ ವಿವಿಧ ರೈತಪರ ಸಂಘಟನೆಗಳು, ಕಬ್ಬು ಬೆಳೆಗಾರರು, ಸಂಘ, ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು ನೀಡಿದ ಬೈಲಹೊಂಗಲ ಬಂದ್ ಕರೆ ಶನಿವಾರ ಸಂಪೂರ್ಣ ಯಶಸ್ವಿ ಆಯಿತು.</p>.<p>ಬಂದ್ ಇದ್ದರೂ ಬೆಳಿಗ್ಗೆ ಅಲ್ಲಲ್ಲಿ ಅಂಗಡಿಗಳನ್ನು ಅರ್ಧ ಭಾಗ ತೆರೆದು ವ್ಯಾಪಾರ ಮಾಡುತ್ತಿದ್ದ ಅಂಗಡಿಗಳ ಮೇಲೆ, ರಸ್ತೆಗಿಳಿದ ಬಸ್ಗಳ ಮೇಲೆ, ಹೊಸೂರ ರಸ್ತೆಯ ಇನಾಮದಾರ ಶುಗರ್ಸ್ ಫ್ಯಾಕ್ಟರಿ ಕಚೇರಿ ಮೇಲೆ ಹೋರಾಟಗಾರರು ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಬೈಲಹೊಂಗಲ ಪಟ್ಟಣದೆಲ್ಲೆಡೆ ಹೋರಾಟಗಾರರು ಎರಡು ಬಾರಿ ಬೈಕ್ ರ್ಯಾಲಿ ನಡೆಸಿ ಅಲ್ಲಲ್ಲಿ ಬೀದಿ ಬದಿಯ ವ್ಯಾಪಾರಸ್ಥರು, ಗೂಡಂಗಡಿಗಳನ್ನು ಬಂದ್ ಮಾಡಿಸಿದರು.</p>.<p>ಧಾರವಾಡ ಬೈಪಾಸ್ ರಸ್ತೆ ಮೂಲಕ ಸಾಗುತ್ತಿದ್ದ ಬಸ್ ಮೇಲೆ, ಬೆಳಗಾವಿ ರಸ್ತೆಯ ಹೊರವಲಯದಲ್ಲಿ ಬೆಳಗಾವಿ, ಬೈಲಹೊಂಗಲ ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಿದರು.</p>.<p>ಸೋಮವಾರ ಪೇಟೆ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರ ಅಂಗಡಿಗಳನ್ನು ಒತ್ತಾಯದಿಂದ ಮುಚ್ಚಿಸಲಾಯಿತು. ಬಜಾರ ರಸ್ತೆ, ಬಸ್ ನಿಲ್ದಾಣ, ಬೆಲ್ಲದ ಕೂಟ, ಎಪಿಎಂಸಿ, ಇಂಚಲ ಕ್ರಾಸ್ ಎಲ್ಲ ಅಂಗಡಿಗಳು, ಬಾರ್, ರೆಸ್ಟೋರೆಂಟ್, ಹೊಟೇಲ್ಗಳನ್ನು ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.</p>.<p>ಮಧ್ಯಾಹ್ನ ಬಸ್, ಖಾಸಗಿ ವಾಹನಗಳ ಓಡಾಟ ಸಂಪೂರ್ಣ ಬಂದ್ ಆಗಿತ್ತು. ಚಿತ್ರ ಮಂದಿರ, ಪೆಟ್ರೋಲ್ ಬಂಕ್, ಶಾಲೆ, ಕಾಲೇಜು ಬಂದ್ ಆಗಿದ್ದವು.</p>.<p>ಡಿವೈಎಸ್ಪಿ ವೀರಯ್ಯ ಹಿರೇಮಠ ಮಾರ್ಗದರ್ಶನದಲ್ಲಿ ಸಿಪಿಐ ಪ್ರಮೋದ ಯಲಿಗಾರ ಬಿಗಿ ಪೊಲೀಸ್ ಬಂದು ಬಸ್ತ್ ಒದಗಿಸಿದ್ದರು.</p>.<p>ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ವಕೀಲ ಶ್ರೀಶೈಲ ಬೋಳನ್ನವರ, ಹೋರಾಟಗಾರರಾದ ಶಂಕರ ಮಾಡಲಗಿ, ಮಹಾಂತೇಶ ಕಮತ, ಮಲ್ಲಿಕಾರ್ಜುನ ಹುಂಬಿ, ಶಂಕರ ಬೋಳನ್ನವರ, ಎಫ್.ಎಸ್.ಸಿದ್ದನಗೌಡರ, ಪ್ರಮೋದಕುಮಾರ ವಕ್ಕುಂದಮಠ, ಸುರೇಶ ವಾಲಿ, ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>